Webdunia - Bharat's app for daily news and videos

Install App

ತಾಯಿ ಸೇರಿ ಐವರು ಹೆಣ್ಣು ಮಕ್ಕಳು ಬಾವಿಗೆ ಹಾರಿದ್ದಾದ್ರು ಯಾಕೆ!?

Webdunia
ಸೋಮವಾರ, 6 ಡಿಸೆಂಬರ್ 2021 (11:57 IST)
ಜೈಪುರ್ : ತಾಯಿಯೊಬ್ಬಳು ತನ್ನ ಐವರು ಹೆಣ್ಣುಮಕ್ಕಳನ್ನು ಜೊತೆಗೆ ಕರೆದುಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ.
ಮೃತರು ಕೋಟಾದ ರಾಮಗಂಜಮಂಡಿ ನಿವಾಸಿಯಾದ ಬಾದಮ್ ದೇವಿ (40) ಹಾಗೂ ಅವರ ಮಕ್ಕಳಾದ ಸಾವಿತ್ರಿ (14), ಅಂಜಲಿ (8), ಕಾಜಲ್ (6), ಗುಂಜನ್ (4) ಹಾಗೂ ಅರ್ಚನಾ (1) ಎಂದು ಗುರುತಿಸಲಾಗಿದೆ. ಬಾದಮ್ ದೇವಿ ತನ್ನ ಮಕ್ಕಳನ್ನು ಜೊತೆಗೆ ಕರೆದುಕೊಂಡು ಬಾವಿಹಾರಿ ಪ್ರಾಣಬಿಟ್ಟಿದ್ದಾರೆ. 
ಪುಟ್ಟ ಕಂದಮ್ಮ ಸೇರಿ ಆರು ಮಂದಿಯೂ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗ್ರಾಮಸ್ಥರ ಸಹಾಯದೊಂದಿಗೆ ನಿನ್ನೆ ಬೆಳಗ್ಗೆ ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಾದಮ್ ದೇವಿ ಅವರು ತನ್ನ ಪತಿ ಶಿವಲಾಲ್ನೊಂದಿಗೆ ಪ್ರತಿದಿನ ಜಗಳವಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೋಟಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments