ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ಹೆಚ್ಚಾಗಿ ನಿರುದ್ಯೋಗಿಗಳು. ಹಾಗಾಗಿ ಹೆಚ್ಚು ಮಕ್ಕಳನ್ನು ಹಡೆಯುತ್ತಾರೆ ಎಂದು ಹೇಳಿ ವಿವಾದಕ್ಕೊಳಗಾಗಿದ್ದಾರೆ.
ಉತ್ತರ ಪ್ರದೇಶ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಜಂ ಖಾನ್ “ಮುಸ್ಲಿಮರಲ್ಲಿ ಹೆಚ್ಚಿನವರು ನಿರುದ್ಯೋಗಿಗಳು. ಅವರಿಗೆ ಮಾಡಲು ಬೇರೆ ಕೆಲಸವಿಲ್ಲ. ಅದಕ್ಕೇ ಹೆಚ್ಚು ಮಕ್ಕಳನ್ನು ಹಡೆಯುತ್ತಾರೆ. ಅಲ್ಪ ಸಂಖ್ಯಾತರಿಗೂ ಉದ್ಯೋಗ ಲಭಿಸಿದರೆ ಅವರು ಹಾಗೆ ಮಾಡಲಾರರು” ಎಂದು ಅಜಂ ಖಾನ್ ತಮ್ಮ ವಾದ ಮಂಡಿಸಿದ್ದಾರೆ.
ಮುಸ್ಲಿಂ ಮತದಾರರನ್ನು ಸೆಳೆಯುವ ಭರದಲ್ಲಿ ಅಜಂ ಖಾನ್ ಹೀಗೊಂದು ಹೇಳಿಕೆ ನೀಡಿದ್ದಾರೆ. ಹಿಂದುಗಳಿಗೆ ಉದ್ಯೋಗವಿದೆ. ಅದಕ್ಕೆ ಅವರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವುದಿಲ್ಲ ಎನ್ನುವುದು ಅಜಂ ಥಿಯರಿ!
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ