Webdunia - Bharat's app for daily news and videos

Install App

ಪ್ರಧಾನಿ ಆಫರ್ ನೀಡಿದರೂ ಇಂಡಿಯಾ ಒಕ್ಕೂಟದ ಜೊತೆ ನಿತೀಶ್ ಕುಮಾರ್ ಹೋಗದೇ ಇರಲು ಕಾರಣ ಬಯಲು

Krishnaveni K
ಶನಿವಾರ, 8 ಜೂನ್ 2024 (17:03 IST)
ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಜೆಡಿಯು ಮತ್ತು ಟಿಡಿಪಿ ಪಾರ್ಟಿಗೆ ಭರ್ಜರಿ ಬೇಡಿಕೆ ಬಂದಿತ್ತು. ಎನ್ ಡಿಎ ಮತ್ತು ಇಂಡಿಯಾ ಒಕ್ಕೂಟಕ್ಕೆ ಸರ್ಕಾರ ರಚಿಸಲು ಈ ಎರಡು ಪಕ್ಷಗಳ ಬೆಂಬಲ ಅಗತ್ಯವಿತ್ತು.

ಇಂತಹ ಸಂದರ್ಭದಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುರನ್ನು ಸೆಳೆಯಲು ಕಾಂಗ್ರೆಸ್ ನಾಯಕರು ಇನ್ನಿಲ್ಲದಂತೆ ಕಸರತ್ತು ನಡೆಸಿದ್ದರು. ಆದರೆ ಈ ಇಬ್ಬರೂ ನಾಯಕರು ಎನ್ ಡಿಎ ಬಿಟ್ಟು ಬರಲು ಒಪ್ಪಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರ ರಚಿಸುವ ಪ್ರಯತ್ನಕ್ಕೆ ತಣ್ಣೀರೆರಚಿದಂತಾಯಿತು.

ಈ ನಡುವೆ ಕಾಂಗ್ರೆಸ್ ನಾಯಕರು ಈ ಇಬ್ಬರೂ ನಾಯಕರಿಗೆ ಇಂಡಿಯಾ ಒಕ್ಕೂಟ ಬೆಂಬಲಿಸಲು ಭಾರೀ ಆಫರ್ ನೀಡಿದ್ದರು ಎನ್ನಲಾಗಿದೆ.  ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ ನೀಡುವುದಾಗಿ ಆಫರ್ ನೀಡಲಾಗಿತ್ತು ಎನ್ನಲಾಗಿತ್ತು. ಆದರೆ ಪ್ರಧಾನಿ ಹುದ್ದೆಯನ್ನೇ ನೀಡುವುದಾಗಿ ಆಫರ್ ನೀಡಿದ್ದಾಗಿ ಇದೀಗ ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.

ಆದರೆ ಚುನಾವಣೆ ಸಮಯದಲ್ಲಿ ಇಂಡಿಯಾ ಒಕ್ಕೂಟದಲ್ಲಿದ್ದಾಗ ಅನ್ಯಾಯವಾಗಿದ್ದರಿಂದ ನಿತೀಶ್ ಯಾವುದೇ ಕಾರಣಕ್ಕೂ ಇಂಡಿಯಾ ಒಕ್ಕೂಟ ಬೆಂಬಲಿಸದೇ ಇರಲು ತೀರ್ಮಾನಿಸಿದರು ಎಂದು ತ್ಯಾಗಿ ಹೇಳಿದ್ದಾರೆ.  ಈಗ ಎನ್ ಡಿಎಗೆ ಬೆಂಬಲಸಿದ್ದೇವೆ. ಇನ್ನು ಹಿಂತಿರುಗಿ ನೋಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments