Webdunia - Bharat's app for daily news and videos

Install App

ಮನಮೋಹನ್ ಸಿಂಗ್ ಗೆ ಕಾಂಗ್ರೆಸ್ ನೀಡಿದ ಗೌರವ ಪ್ರಣಬ್ ಮುಖರ್ಜಿಗೆ ಯಾಕಿರಲಿಲ್ಲ

Krishnaveni K
ಶನಿವಾರ, 28 ಡಿಸೆಂಬರ್ 2024 (15:11 IST)
ನವದೆಹಲಿ: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನರಾದ ಬಳಿಕ ಕಾರ್ಯಕಾರಿ ಸಮಿತಿ ಸಭೆ ಕರೆದು ಕಾಂಗ್ರೆಸ್ ನಾಯಕರು ಮಾಜಿ ಪ್ರಧಾನಿಗಳ ಸ್ಮಾರಕ ನಿರ್ಮಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲು ತೀರ್ಮಾನ ಕೈಗೊಂಡಿತ್ತು. ಆದರೆ ಇದೇ ಮುತುವರ್ಜಿ ಪ್ರಣಬ್ ಮುಖರ್ಜಿ ತೀರಿಕೊಂಡಾಗ ಯಾಕಿರಲಿಲ್ಲ ಎಂದು ಅವರ ಪುತ್ರಿ ಶರ್ಮಿಷ್ಠ ಮುಖರ್ಜಿ ವಾಗ್ದಾಳಿ ನಡೆಸಿದ್ದಾರೆ.

ನನ್ನ ತಂದೆ ಪ್ರಣಬ್ ಮುಖರ್ಜಿ ತೀರಿಕೊಂಡಾಗ ಕಾಂಗ್ರೆಸ್ ನಾಯಕರು ಕಾರ್ಯಕಾರಿ ಸಭೆ ಬಿಡಿ ಶ್ರದ್ಧಾಂಜಲಿ ಸಭೆ ಕರೆಯುವ ಔದಾರ್ಯವನ್ನೂ ತೋರಲಿಲ್ಲ.  ಈ ಬಗ್ಗೆ ಹಿರಿಯ ನಾಯಕರೊಬ್ಬರನ್ನು ಕೇಳಿದಾಗ ರಾಷ್ಟ್ರಪತಿ ಹುದ್ದೆಯಲ್ಲಿದ್ದವರಿಗೆ ಇದನ್ನು ಮಾಡಲಾಗುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ಆದರೆ ತಂದೆಯ ಡೈರಿಯಿಂದ ಆ ಬಳಿಕ ನನಗೆ ಗೊತ್ತಾಗಿದ್ದು, ಈ ಹಿಂದೆ ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ತೀರಿಕೊಂಡಾಗ ಕಾಂಗ್ರೆಸ್ ಶ್ರದ್ಧಾಂಜಲಿ ಸಭೆ ನಡೆಸಿತ್ತು.

ಈಗ ಮನಮೋಹನ್ ಸಿಂಗ್ ಜೀ ಅವರಿಗೆ ಸ್ಮಾರಕ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದು ಸೂಕ್ತವೇ. ಯಾಕೆಂದರೆ ನಮ್ಮ ತಂದೆಯವರೂ ರಾಷ್ಟ್ರಪತಿಗಳಾಗಿದ್ದಾಗ ಮನಮೋಹನ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕೆಂದಿದ್ದರು. ಆದರೆ ಕೆಲವೊಂದು ಕಾರಣಗಳಿಗೆ ಅದು ಸಾಧ್ಯವಾಗಲಿಲ್ಲ. ಅದನ್ನು ನಾನಿಲ್ಲಿ ಹೇಳಲು ಇಷ್ಟಪಡುವುದಿಲ್ಲ’ ಎಂದಿದ್ದಾರೆ.

ಡಾ ಮನಮೋಹನ್ ಸಿಂಗ್ ಅವರಿಗೆ ಸ್ಮಾರಕ ನಿರ್ಮಿಸುವಂತೆ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಬೆನ್ನಲ್ಲೇ ಶರ್ಮಿಷ್ಠ ಈ ರೀತಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru Suhas Shetty Murder: ಸುಹಾಸ್ ಶೆಟ್ಟಿ ಮರ್ಡರ್ ಮಾಡಿದ ಆರೋಪಿಗಳು ಎಸ್ಕೇಪ್ ಆಗುವುದನ್ನು ನೋಡುತ್ತಾ ನಿಂತ ಪಬ್ಲಿಕ್: ವಿಡಿಯೋ

Viral video: ಪಾಕಿಸ್ತಾನ ಬಾವುಟ ರಸ್ತೆಯಿಂದ ತೆಗೆಯಲು ಯತ್ನಿಸಿದ ಮುಸ್ಲಿಂ ವಿದ್ಯಾರ್ಥಿನಿ: ಶಾಲೆಯಿಂದಲೇ ಔಟ್

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Mangaluru Suhas Shetty murder: ಕಾಶ್ಮೀರದಂತೆ ಕರ್ನಾಟಕದಲ್ಲೇ ಹಿಂದೂಗಳ ಮೇಲೆ ದಾಳಿ ನಡೆಯುತ್ತದೆ: ಬಿವೈ ವಿಜಯೇಂದ್ರ

Gold Price today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

ಮುಂದಿನ ಸುದ್ದಿ
Show comments