Webdunia - Bharat's app for daily news and videos

Install App

ಮಂಡನೆ ವೇಳೆ ವಿಪ್ ಇದ್ದರೂ ಗೈರಾದ ಪ್ರಿಯಾಂಕ ಗಾಂಧಿ ವಾದ್ರಾ: ಎಲ್ಲಿದ್ದರು ಸಂಸದೆ

Krishnaveni K
ಶುಕ್ರವಾರ, 4 ಏಪ್ರಿಲ್ 2025 (14:06 IST)
ನವದೆಹಲಿ: ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ ವೇಳೆ ಕಾಂಗ್ರೆಸ್ ಪಕ್ಷ ತನ್ನ ಎಲ್ಲಾ ಸಂಸದರಿಗೆ ಹಾಜರಾತಿ ಇರಬೇಕೆಂದು ಸೂಚನೆ ಕೊಟ್ಟಿದ್ದರೂ ಗಾಂಧಿ ಕುಟುಂಬದ ಕುಡಿ ಪ್ರಿಯಾಂಕ ವಾದ್ರಾ ಗೈರಾಗಿದ್ದರು. ಅವರು ಎಲ್ಲಿ ಹೋಗಿದ್ದರು ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ.

ವಕ್ಫ್ ತಿದ್ದುಪಡಿ ಮಸೂದೆಯನ್ನು ಮೊನ್ನೆ ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ನಿನ್ನೆ ರಾಜ್ಯಸಭೆಯಲ್ಲಿ ಮಂಡಿಸಲಾಗಿತ್ತು. ಎರಡೂ ಸಭೆಯಲ್ಲಿ ಈಗ ಮಸೂದೆಗೆ ಅಂಗೀಕಾರ ಸಿಕ್ಕಿದ್ದು ರಾಷ್ಟ್ರಪತಿಗಳ ಒಪ್ಪಿಗೆ ಮುದ್ರೆಯೊಂದಷ್ಟೇ ಬಾಕಿ.

ಇದರ ನಡುವೆ ವಕ್ಫ್ ಮಸೂದೆ ವಿರೋಧಿಸುತ್ತಲೇ ಬಂದ ಕಾಂಗ್ರೆಸ್ ಮಸೂದೆ ವಿರುದ್ಧ ಮತ ಹಾಕಲು ತನ್ನ ಎಲ್ಲಾ ಸಂಸದರೂ ಕಡ್ಡಾಯವಾಗಿ ಸಂಸತ್ ಗೆ ಹಾಜರಾಗಲೇಬೇಕು ಎಂದು ವಿಪ್ ಜಾರಿ ಮಾಡಿತ್ತು. ಹಾಗಿದ್ದರೂ ಪ್ರಿಯಾಂಕ ವಾದ್ರಾ ಗೈರಾಗಿದ್ದರು.

ಅಷ್ಟಕ್ಕೂ ಪ್ರಿಯಾಂಕ ಯಾಕೆ ಗೈರಾಗಿದ್ದರು ಎಂಬುದಕ್ಕೆ ಉತ್ತರ ಸಿಕ್ಕಿದೆ. ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುವ ಉದ್ದೇಶದಿಂದ ಪ್ರಿಯಾಂಕ ವಿದೇಶದಲ್ಲಿದ್ದಾರೆ. ಈ ಬಗ್ಗೆ ಅವರು ಮುಂಚಿತವಾಗಿಯೇ ಸ್ಪೀಕರ್ ಮತ್ತು ಕಾಂಗ್ರೆಸ್ ಸಂಸದೀಯ ಸಮಿತಿಗೆ ಪತ್ರ ಬರೆದು ವಿನಾಯ್ತಿ ಕೋರಿದ್ದರು. ಹೀಗಾಗಿ ಅವರು ಗೈರಾಗಿದ್ದರೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments