Webdunia - Bharat's app for daily news and videos

Install App

ಮಂಡನೆ ವೇಳೆ ವಿಪ್ ಇದ್ದರೂ ಗೈರಾದ ಪ್ರಿಯಾಂಕ ಗಾಂಧಿ ವಾದ್ರಾ: ಎಲ್ಲಿದ್ದರು ಸಂಸದೆ

Krishnaveni K
ಶುಕ್ರವಾರ, 4 ಏಪ್ರಿಲ್ 2025 (14:06 IST)
ನವದೆಹಲಿ: ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ ವೇಳೆ ಕಾಂಗ್ರೆಸ್ ಪಕ್ಷ ತನ್ನ ಎಲ್ಲಾ ಸಂಸದರಿಗೆ ಹಾಜರಾತಿ ಇರಬೇಕೆಂದು ಸೂಚನೆ ಕೊಟ್ಟಿದ್ದರೂ ಗಾಂಧಿ ಕುಟುಂಬದ ಕುಡಿ ಪ್ರಿಯಾಂಕ ವಾದ್ರಾ ಗೈರಾಗಿದ್ದರು. ಅವರು ಎಲ್ಲಿ ಹೋಗಿದ್ದರು ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ.

ವಕ್ಫ್ ತಿದ್ದುಪಡಿ ಮಸೂದೆಯನ್ನು ಮೊನ್ನೆ ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ನಿನ್ನೆ ರಾಜ್ಯಸಭೆಯಲ್ಲಿ ಮಂಡಿಸಲಾಗಿತ್ತು. ಎರಡೂ ಸಭೆಯಲ್ಲಿ ಈಗ ಮಸೂದೆಗೆ ಅಂಗೀಕಾರ ಸಿಕ್ಕಿದ್ದು ರಾಷ್ಟ್ರಪತಿಗಳ ಒಪ್ಪಿಗೆ ಮುದ್ರೆಯೊಂದಷ್ಟೇ ಬಾಕಿ.

ಇದರ ನಡುವೆ ವಕ್ಫ್ ಮಸೂದೆ ವಿರೋಧಿಸುತ್ತಲೇ ಬಂದ ಕಾಂಗ್ರೆಸ್ ಮಸೂದೆ ವಿರುದ್ಧ ಮತ ಹಾಕಲು ತನ್ನ ಎಲ್ಲಾ ಸಂಸದರೂ ಕಡ್ಡಾಯವಾಗಿ ಸಂಸತ್ ಗೆ ಹಾಜರಾಗಲೇಬೇಕು ಎಂದು ವಿಪ್ ಜಾರಿ ಮಾಡಿತ್ತು. ಹಾಗಿದ್ದರೂ ಪ್ರಿಯಾಂಕ ವಾದ್ರಾ ಗೈರಾಗಿದ್ದರು.

ಅಷ್ಟಕ್ಕೂ ಪ್ರಿಯಾಂಕ ಯಾಕೆ ಗೈರಾಗಿದ್ದರು ಎಂಬುದಕ್ಕೆ ಉತ್ತರ ಸಿಕ್ಕಿದೆ. ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುವ ಉದ್ದೇಶದಿಂದ ಪ್ರಿಯಾಂಕ ವಿದೇಶದಲ್ಲಿದ್ದಾರೆ. ಈ ಬಗ್ಗೆ ಅವರು ಮುಂಚಿತವಾಗಿಯೇ ಸ್ಪೀಕರ್ ಮತ್ತು ಕಾಂಗ್ರೆಸ್ ಸಂಸದೀಯ ಸಮಿತಿಗೆ ಪತ್ರ ಬರೆದು ವಿನಾಯ್ತಿ ಕೋರಿದ್ದರು. ಹೀಗಾಗಿ ಅವರು ಗೈರಾಗಿದ್ದರೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments