Webdunia - Bharat's app for daily news and videos

Install App

ಪ್ರಧಾನಿ ಅಭ್ಯರ್ಥಿ ರೇಸ್ ನಿಂದ ರಾಹುಲ್ ಗಾಂಧಿ ಹಿಂದೆ ಸರಿಯಲು ಕಾರಣವೇನು ಗೊತ್ತಾ?!

Webdunia
ಬುಧವಾರ, 25 ಜುಲೈ 2018 (09:59 IST)
ನವದೆಹಲಿ: ಕಾಂಗ್ರೆಸ್ ಗೆದ್ದರೆ ತಾವೇ ಪ್ರಧಾನಿ ಅಭ್ಯರ್ಥಿ ಎನ್ನುತ್ತಿದ್ದ ರಾಹುಲ್ ಗಾಂಧಿ ಇದೀಗ ಪ್ರಧಾನಿ ರೇಸ್ ನಿಂದ ತುಸು ಹಿಂದೆ ಸರಿದಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಬಹುಮತ ಗಳಿಸುವುದು ಕಷ್ಟ. ಮಿತ್ರ ಪಕ್ಷಗಳ ಸಹಾಯವಿಲ್ಲದೇ ಕಾಂಗ್ರೆಸ್ ಗೆಲ್ಲಲಾರದು. ಆದರೆ ರಾಹುಲ್ ಪ್ರಧಾನಿ ಅಭ್ಯರ್ಥಿಯಾಗುವುದು ಮಿತ್ರ ಪಕ್ಷಗಳಿಗೆ ಇಷ್ಟವಿಲ್ಲ.

ಬಿಎಸ್ ಪಿ, ತೃಣಮೂಲ ಕಾಂಗ್ರೆಸ್ ನಾಯಕಿಯರಿಗೆ ತಾವೇ ಪ್ರಧಾನಿ ಅಭ್ಯರ್ಥಿಯಾಗಬೇಕೆಂಬ ಮಹದಾಸೆಯಿದೆ. ಮಾಯಾವತಿ, ಮಮತಾ ಬ್ಯಾನರ್ಜಿ ಸಹಾಯವಿಲ್ಲದೇ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲುವುದು ಕಷ್ಟ.

ಇನ್ನು ಮಹಿಳೆಯರ ಪರ ಎನ್ನುವ ಕಾಂಗ್ರೆಸ್ ಈ ಬಾರಿ ಮಹಿಳಾ ಅಭ್ಯರ್ಥಿಯನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿದರೆ ಹೆಚ್ಚಿನ ಸೀಟು ಗೆಲ್ಲಬಹುದು. ಆದರೆ ಕಾಂಗ್ರೆಸ್ ನಲ್ಲಿ ಮಹಿಳಾ ಅಭ್ಯರ್ಥಿಗಳಿಲ್ಲ. ಹೀಗಾಗಿ ಮಮತಾ ಅಥವಾ ಮಾಯಾವತಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿ ಹೆಚ್ಚಿನ ಓಟು ಗೆಲ್ಲುವುದು ಕಾಂಗ್ರೆಸ್ ಲೆಕ್ಕಾಚಾರ. ಮಾಯಾವತಿಗೆ ಕರ್ನಾಟಕದಲ್ಲಿ ಜೆಡಿಎಸ್, ಆಂಧ್ರಪ್ರದೇಶದಲ್ಲಿ ಟಿಡಿಪಿ ಬೆಂಬಲ ಸಿಗಬಹುದು. ಇದೆಲ್ಲಾ ಲೆಕ್ಕಾಚಾರ ಹಾಕಿಯೇ ರಾಹುಲ್ ಪ್ರಧಾನಿ ಕುರ್ಚಿಯ ರೇಸ್ ನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments