Webdunia - Bharat's app for daily news and videos

Install App

ಹಾಲು ತರಲು ಹಣ ಕೇಳಿದ ಪತ್ನಿಯನ್ನು ಸಜೀವವಾಗಿ ದಹಿಸಿದ ಪತಿ ಮಹಾಶಯ

Webdunia
ಶನಿವಾರ, 3 ಡಿಸೆಂಬರ್ 2016 (15:12 IST)
ಹಾಲು ಖರೀದಿಸಲು ಪತ್ನಿ ಹಣ ಕೇಳಿದ್ದರಿಂದ ಆಕ್ರೋಶಗೊಂಡ ಪತಿ ಮಹಾಶಯ ಅಕೆಯನ್ನು ಸಜೀವವಾಗಿ ದಹಿಸಲು ಯತ್ನಿಸಿದ ಹೇಯ ಘಟನೆ ವರದಿಯಾಗಿದೆ. ಮಹಿಳೆಗೆ ಶೇ.80 ರಷ್ಟು ಸುಟ್ಟಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
 
ಬೋಸರಿ ಪ್ರದೇಶದ ಬಾಲಾಜಿ ನಗರ ನಿವಾಸಿಯಾದ 21 ವರ್ಷ ವಯಸ್ಸಿನ ಮಹಿಳೆ ರೇಖಾ ಜಾಧವ್, ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಯನ್ನು ಎದುರಿಸುತ್ತಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಪತಿ ಶಹಾಜಿ ಜಾಧವ್‌ನನ್ನು ಪೊಲೀಸರು ಬಂಧಿಸಿದ್ದಾರೆ. 
 
ಪತಿ ಮತ್ತು ಪತ್ನಿಯ ಮಧ್ಯೆ ಪ್ರತಿನಿತ್ಯ ಕಲಹವಾಗುತ್ತಿದ್ದು, ರೇಖಾಳ ತಂದೆ ಆಕೆಯ ಮನೆಗೆ ತೆರಳಿ ಪತಿ ಪತ್ನಿಯ ಮಧ್ಯದ ವಿರಸವನ್ನು ಬಗೆಹರಿಸಲು ಪ್ರಯತ್ನಿಸಿದ್ದರು ಎಂದು ಭೋಸರಿ ಪೊಲೀಸ್ ಠಾಣೆಯ ಅಧಿಕಾರಿ ಭೀಮರಾವ್ ಶಿಂಗಾಡೆ ತಿಳಿಸಿದ್ದಾರೆ.
 
ಜೀವನ್ಮರಣದ ಸ್ಥಿತಿಯಲ್ಲಿರು ರೇಖಾ ಪೊಲೀಸರಿಗೆ ಹೇಳಿಕೆ ನೀಡಿ, ಬೆಳಿಗ್ಗೆ ಟೀ ತಯಾರಿಸುವಂತೆ ಪತಿ ನನಗೆ ಹೇಳಿದ.ಆದರೆ, ಮನೆಯಲ್ಲಿ ಹಾಲು ಇರಲಿಲ್ಲ. ಹಾಲು ತರಲು ಹಣ ನೀಡುವಂತೆ ಪತಿಯನ್ನು ಕೋರಿದಾಗ, ಕೋಪಗೊಂಡ ಆತ ನನ್ನ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಎಂದು ತಿಳಿಸಿದ್ದಾಳೆ.
 
ಪೊಲೀಸರು ಆರೋಪಿ ಶಹಾಜಿ ಜಾಧವ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಘಟನೆ ನಡೆದಾಗ ತಾನು ಮನೆಯಲ್ಲಿಯೇ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ. ಆದರೆ, ಆತನ ಪತ್ನಿಯ ಹೇಳಿಕೆಯ ಮೇರೆಗೆ ಜಾಧವ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments