ಜೀವನಾಂಶವಾಗಿ ಕೋಟಿ ಹಣ, ಕಾರು, ಮನೆ ಕೇಳಿದ ಪತ್ನಿ: ನೀವೇ ದುಡಿಯಕ್ಕಾಗಲ್ವಾ ಎಂದ ಕೋರ್ಟ್

Krishnaveni K
ಬುಧವಾರ, 23 ಜುಲೈ 2025 (10:55 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ವಿಚ್ಛೇದನವಾಗುವಾಗ ಪತ್ನಿ ಭಾರೀ ಡಿಮ್ಯಾಂಡ್ ಮಾಡುತ್ತಿರುವ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿವೆ. ಇದೀಗ ಸುಪ್ರೀಂಕೋರ್ಟ್ ಅಂತಹದ್ದೇ ಬೇಡಿಕೆಯ ಲಿಸ್ಟ್ ಇಟ್ಟ ಪತ್ನಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಿದೆ.

ಎಂಬಿಎ ಪದವಿ ಪಡೆದ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದಿದ್ದಾಳೆ. ಈ ವೇಳೆ ಜೀವನಾಂಶವಾಗಿ 12 ಕೋಟಿ ರೂ. ಹಣ, ಮುಂಬೈನಲ್ಲಿ ಒಂದು ಮನೆ, ಬಿಎಂಡಬ್ಲ್ಯು ಕಾರಿಗಾಗಿ ಬೇಡಿಕೆಯಿಟ್ಟಿದ್ದಾಳೆ. ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಬಿಆರ್ ಗವಾಯಿ ಇದನ್ನೆಲ್ಲಾ ನೀವೇ ದುಡಿಯಬಹುದಲ್ವೇ ಎಂದು ಕೇಳಿದ್ದಾರೆ.

ನೀವು ಉನ್ನತ ಶಿಕ್ಷಣ ಪಡೆದಿದ್ದೀರಿ. ನಿಮ್ಮ ವಿದ್ಯಾರ್ಹತೆಗೆ ಬೆಂಗಳೂರು, ಹೈದರಾಬಾದ್ ನಂತಹ ನಗರದಲ್ಲಿ ಒಳ್ಳೆಯ ಕೆಲಸವೇ ಸಿಗುತ್ತದೆ. ಹೀಗಾಗಿ ಇದನ್ನೆಲ್ಲಾ ನೀವೇ ದುಡಿಯಬಹುದು. ಈಗ ಪತಿಯಿಂದ 4 ಕೋಟಿ ರೂ. ಹಣ, ಒಂದು ಮನೆ ಸಿಗುತ್ತದೆ. 18 ತಿಂಗಳ ವಿವಾಹದ ಬಳಿಕ ಬಿಎಂಡಬ್ಲ್ಯು ಕಾರು ಕೂಡಾ ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ವಿಚ್ಛೇದನ ಸಂದರ್ಭದಲ್ಲಿ ಪುರುಷರಿಗೆ ಅನ್ಯಾಯವಾಗುತ್ತಿದೆ ಎಂದು ಇತ್ತೀಚೆಗೆ ಆಕ್ರೋಶ ಹೆಚ್ಚಾಗಿದೆ. ಭಾರೀ ಮೊತ್ತದ ಹಣ ಕೊಡಬೇಕಾಗಿ ಬಂದರೆ ಪುರುಷರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಇದರಿಂದಾಗಿ ಕೆಲವು ಆತ್ಮಹತ್ಯೆ ಪ್ರಕರಣಗಳೂ ನಡೆದಿದ್ದು ಇದೆ. ಈ ನಿಟ್ಟಿನಲ್ಲಿ ನ್ಯಾ. ಬಿಆರ್ ಗವಾಯಿ ಅವರ ಈ ತೀರ್ಪು ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments