Webdunia - Bharat's app for daily news and videos

Install App

ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Webdunia
ಭಾನುವಾರ, 17 ಅಕ್ಟೋಬರ್ 2021 (12:28 IST)
ಮಹಾರಾಷ್ಟ್ರ: ಗಂಡ-ಹೆಂಡತಿಯ ಜಗಳ ಉಂಡು ಮಲಗುವವರೆಗೆ ಎಂಬ ಮಾತೆಲ್ಲ ಹಳೆಯದಾಯ್ತು. ಈಗಂತೂ ಗೊರಕೆ ಹೊಡೆದಿದ್ದಕ್ಕೆ, ಕೆಮ್ಮಿದ್ದಕ್ಕೆ, ಸೀನಿದ್ದಕ್ಕೂ ಡೈವೋರ್ಸ್ ಕೊಡುವವರಿದ್ದಾರೆ. ಆದರೆ, ಕೆಲವು ಘಟನೆಗಳು ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ.

ಆ ರೀತಿಯ ವಿಚಿತ್ರವಾದ ಮತ್ತು ಶಾಕಿಂಗ್ ಘಟನೆಯೊಂದು ಇಲ್ಲಿದೆ. ಮಹಾರಾಷ್ಟ್ರದ ಭಾಂದರದ ಮಸಲ್ನಲ್ಲಿ ಗಂಡ ತನ್ನ ಮೊಬೈಲ್ ಅನ್ನು ವಾಪಾಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ಆತನ ತುಟಿಯನ್ನೇ ಕತ್ತರಿಸಿದ್ದಾಳೆ!
ಅಚ್ಚರಿಯಾದರೂ ಇದು ಸತ್ಯ. ಮಸಲ್ನಲ್ಲಿ 40 ವರ್ಷದ ಖೇಮ್ರಾಜ್ ಬಾಬೂರಾವ್ ಮುಲ್ ಎಂಬ ವ್ಯಕ್ತಿ ಭಾಂದರದಲ್ಲಿ ವಾಸವಾಗಿದ್ದರು. ತನ್ನ ಮೊಬೈಲ್ ಹಾಳಾಗಿದ್ದರಿಂದ ಮನೆಯಲ್ಲಿದ್ದಾಗ ಅವರು ಹೆಂಡತಿಯ ಮೊಬೈಲ್ ಅನ್ನು ಬಳಸುತ್ತಿದ್ದರು. ತನ್ನ ಮೊಬೈಲನ್ನು ಯಾವಾಗಲೂ ಗಂಡನೇ ಹಿಡಿದುಕೊಂಡಿರುತ್ತಾನೆ ಎಂದು ಕೋಪಗೊಂಡ ಹೆಂಡತಿ ಆತನೊಂದಿಗೆ ಅದೇ ವಿಷಯಕ್ಕೆ ಜಗಳ ಮಾಡಿದರು.
ಕಳೆದ ಗುರುವಾರ ಮೊಬೈಲ್ ವಿಷಯಕ್ಕೆ ಗಂಡನೊಂದಿಗೆ ಜಗಳವಾಡಿದ ಹೆಂಡತಿ ಮೊಬೈಲ್ ವಾಪಾಸ್ ಕೊಡುವಂತೆ ಕೇಳಿದಳು. ಅದಕ್ಕೆ ಗಂಡ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ಆಕೆ ಗಂಡನ ತುಟಿಯನ್ನು ಚಾಕುವಿನಿಂದ ಕತ್ತರಿಸಿದ್ದಾಳೆ. ಚಾಕುವನ್ನು ಗಂಡನ ಮುಖದ ಮೇಲೆ ಎಸೆದಾಗ ಆ ಚಾಕು ಆತನ ತುಟಿಗೆ ತಾಗಿ ತುಟಿ ಕತ್ತರಿಸಿಹೋಗಿದೆ.ಬಳಿಕ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡನ ಮೇಲೆ ಹಲ್ಲೆ ಮಾಡಿದ ಹೆಂಡತಿಯ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments