Webdunia - Bharat's app for daily news and videos

Install App

ಕೇಂದ್ರ, ರಾಜ್ಯದಲ್ಲಿ ನಮ್ಮ ಸರ್ಕಾರವಿದೆ ಬೆರಳು ತೋರಿಸಿದ್ರೆ ಕತ್ತರಿಸ್ತೇವೆ: ಬಿಜೆಪಿ

Webdunia
ಶುಕ್ರವಾರ, 29 ಮಾರ್ಚ್ 2019 (18:56 IST)
ಲಕ್ನೋ: ಬಿಜೆಪಿ ಪಕ್ಷ ಮತ್ತು ಬಿಜೆಪಿ ಸದಸ್ಯರ ವಿರುದ್ಧ ಯಾರಾದರೂ ಬೆರಳು ತೋರಿಸಿದಲ್ಲಿ ಕತ್ತರಿಸಿ ಹಾಕ್ತೇವೆ ಎಂದು ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದ ಮುಖ್ಯಸ್ಥ, ಬಿಜೆಪಿ ಅಭ್ಯರ್ಥಿ ರಾಮ್ ಶಂಕರ್ ಕಠಾರಿಯಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ನಮ್ಮ ಸರಕಾರವಿದೆ. ಆದ್ದರಿಂದ,ಯಾರಾದರೂ ನಮ್ಮ ವಿರುದ್ಧ ಬೆರಳು ತೋರಿಸಿದರೆ ಬೆರಳು ಮುರಿದು ಹಾಕ್ತೇವೆ ಎಂದು ಗುಡುಗಿದ್ದಾರೆ.
 
ಹಿಂದೆ ಮಾಯಾವತಿ ಸರಕಾರವಿದ್ದಾಗ ನನ್ನ ವಿರುದ್ಧ 29 ಕೇಸ್‌ಗಳನ್ನು ದಾಖಲಿಸಿದ್ದಾರೆ. ನಾನು ಎಲ್ಲಾ ಕೇಸ್‌ಗಳ ವಿರುದ್ಧ ಹೋರಾಡಿದ್ದೇನೆ. ಮಾಯಾವತಿಗೆ ನನ್ನನ್ನು ಜೈಲಿಗೆ ತಳ್ಳಲು ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿದರು.
 
ಮಾಯಾವತಿ ಮುಖ್ಯಮಂತ್ರಿಯಾಗಿದ್ದಾಗ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಹೋರಾಟ ಮಾಡಿದ್ದೇನೆ. ನಮ್ಮ ವಿರುದ್ಧ ಯಾವ ರೀತಿ ವರ್ತಿಸುತ್ತೀರೋ ಅದೇ ರೀತಿ ನಾವು ವರ್ತಿಸುತ್ತೇವೆ. ನಾನು ನಿಮ್ಮ ಜತೆ ಯಾವಾಗಲೂ ಇರುತ್ತೇನೆ ಎಂದು ಬಿಜೆಪಿ ಸದಸ್ಯರಿಗೆ ಬಿಜೆಪಿ ಅಭ್ಯರ್ಥಿ ರಾಮ್ ಶಂಕರ್ ಕಠಾರಿಯಾ ಭರವಸೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments