Webdunia - Bharat's app for daily news and videos

Install App

ಮೂರು ತಿಂಗಳಲ್ಲಿ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ: ರೇಪ್ ಪೀಡಿತರು

Webdunia
ಮಂಗಳವಾರ, 2 ಆಗಸ್ಟ್ 2016 (15:55 IST)
ಮುಂದಿನ ಮೂರು ತಿಂಗಳಲ್ಲಿ ನಮಗೆ ನ್ಯಾಯ ದೊರೆಯದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬುಲಂದ್‌ಶಹರ್ ಸಾಮೂಹಿಕ ಅತ್ಯಾಚಾರ ಪೀಡಿತ ತಾಯಿ ಮತ್ತು ಮಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದಲ್ಲಿ ಉತ್ತರ ಪ್ರದೇಶ್ ಪೊಲೀಸರು ನಿರ್ಲಕ್ಷ್ಯವನ್ನು ತೋರಿದ್ದಾರೆ ಎಂದು ಪೀಡಿತರ ಕುಟುಂಬ ಆರೋಪಿಸಿದ ಬಳಿಕ ತನಿಖೆಗಾಗಿ  300 ಸದಸ್ಯರ ತನಿಖಾ ತಂಡವನ್ನು  ರಚಿಸಲಾಗಿದೆ. ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದ್ದಾಗ ಪೊಲೀಸರ ವಾಹನವೊಂದು ಅದೇ ಸ್ಥಳದಿಂದ ವೇಗವಾಗಿ ಹಾದು ಹೋಯಿತು. ನಾವು ಕೂಗಾಡುತ್ತಿದ್ದರೂ ನಮ್ಮ ಧ್ವನಿ ಅವರಿಗೆ ಕೇಳಿಸಲಿಲ್ಲ. ಪೊಲೀಸ್ ಸಹಾಯವಾಣಿ ಒಂದು ಸಲ ವ್ಯಸ್ತವೆಂದು ಬರುತ್ತಿತ್ತು, ಇನ್ನೊಂದು ಕ್ಷಣದಲ್ಲಿ ರಿಂಗ್ ಆದರೂ ಯಾರೂ ಸ್ಪಂದಿಸುತ್ತಿರಲಿಲ್ಲ ಎಂದು ಪೀಡಿತರಲ್ಲಿ ಒಬ್ಬರು ದೂರಿದ್ದಾರೆ.

4:01 ಗಂಟೆಗೆ ನಾವು ಪೊಲೀಸ್ ಠಾಣೆಗೆ ಕರೆ ಮಾಡಿದೆವು. ಆದರೆ ಯಾರೂ ಉತ್ತರಿಸಲಿಲ್ಲ. ಆಗ ನಾವು ನೊಯ್ಡಾದಲ್ಲಿರುವ ಗೆಳೆಯನಿಗೆ ಕರೆ ಮಾಡಿ ಸಹಾಯ ಕೇಳಿದೆವು. ಆತ ನಮಗೆ ಸಹಾಯ ಮಾಡಿದ. 15 ನಿಮಿಷದ ಬಳಿಕ ನಾವು ಮತ್ತೆ ಪೊಲೀಸ್ ಠಾಣೆಗೆ ಕರೆ ಮಾಡಿದೆವು. ಆದರೆ ಆ ಕಡೆಯಿಂದ ಉತ್ತರ ಬರಲಿಲ್ಲ. ಪೊಲೀಸರ ನಿರ್ಲಕ್ಷ್ಯತನ ನಮ್ಮ ಈ ಅವಸ್ಥೆಗೆ ಕಾರಣ. ನಮಗೆ ನ್ಯಾಯ ಸಿಗದಿದ್ದರೆ  ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಪೀಡಿತ ಬಾಲಕಿ ತಂದೆ ಎಚ್ಚರಿಕೆ ನೀಡಿದ್ದಾರೆ.

ಹೆದ್ದಾರಿಯಲ್ಲಿ ಬರುತ್ತಿದ್ದ ಕಾರೊಂದನ್ನು ತಡೆಗಟ್ಟಿದ ದುಷ್ಕರ್ಮಿಗಳು ಅದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರ ಮೇಲೆ ಹಲ್ಲೆ ಮಾಡಿ ಬಂದೂಕು ತೋರಿಸಿ ತಾಯಿ ಮತ್ತು 13 ವರ್ಷದ ಮಗಳನ್ನು ಎಳೆದೊಯ್ದ ಅತ್ಯಾಚಾರ ನಡೆಸಿದ್ದರು. ಘಟನೆ ನಡೆದ ಸ್ಥಳದಿಂದ 100ಮೀಟರ್‌ಗಳ ಅಂತರದಲ್ಲೇ ಪೊಲೀಸ್ ಠಾಣೆ ಇದ್ದು, ಹಲ್ಲೆಗೊಳಗಾದವರ ಕಾರು 3 ಗಂಟೆಗಳ ಕಾಲ ಅಲ್ಲಿಯೇ  ನಿಂತಿದ್ದರೂ ಪೊಲೀಸರ ಗಮನಕ್ಕೆ ಬಂದಿರಲಿಲ್ಲ.

ಘಟನೆಯ ಕುರಿತಂತೆ ಮತ್ತು ಆರೋಪಿಗಳನ್ನು ಬಂಧಿಸಲು ಕೈಗೊಂಡಿರುವ ಕ್ರಮಗಳ ಕುರಿತಂತೆ ವಿಸ್ತ್ರತ ವರದಿ ನೀಡುವಂತೆ ಕೇಂದ್ರ, ರಾಜ್ಯ ಸರ್ಕಾರವನ್ನು ಕೇಳಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments