Webdunia - Bharat's app for daily news and videos

Install App

ಆಪ್ ಶಾಸಕರ ವಿರುದ್ಧ ಸುಳ್ಳು ಕೇಸ್: ಕೇಜ್ರಿವಾಲ್‌ರಿಂದ ಸೆ.30 ರಂದು ಸ್ಫೋಟಕ ಸಂಚು ಬಹಿರಂಗ

Webdunia
ಮಂಗಳವಾರ, 27 ಸೆಪ್ಟಂಬರ್ 2016 (20:39 IST)
ಆಮ್ ಆದ್ಮಿ ಪಕ್ಷದ ಶಾಸಕರ, ಸಚಿವರ ವಿರುದ್ಧ ಸುಳ್ಳು ಕೇಸ್‌ಗಳನ್ನು ದಾಖಲಿಸುತ್ತಿರುವ ಹಿಂದಿನ ಭಾರಿ ಷಡ್ಯಂತ್ರವನ್ನು ಶುಕ್ರವಾರದಂದು ಬಹಿರಂಗಪಡಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
 
ದೆಹಲಿ ವಿಧಾನಸಭೆಯಲ್ಲಿ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಕೇಜ್ರಿವಾಲ್, ಆಪ್ ಮುಖಂಡರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವ ಹಿಂದೆ ಸಂಚಿದೆ ಎಂದು ಆರೋಪಿಸಿದರು.
 
ದೆಹಲಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಮತ್ತು ಚಿಕನ್‌ಗುನ್ಯಾ ರೋಗಗಳ ನಿಯಂತ್ರಣ, ಆಪ್ ಶಾಸಕರ ವಿರುದ್ಧ ತಪ್ಪು ಎಫ್‌ಐಆರ್‌ಗಳ ದಾಖಲಿಕೆ ಕುರಿತಂತೆ ಚರ್ಚಿಸಲು ದೆಹಲಿ ಸಚಿವ ಸಂಪುಟ ನಿರ್ಧರಿಸಿತ್ತು ಎಂದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.
 
ಆಪ್ ಶಾಸಕರು, ಸಚಿವರ ವಿರುದ್ಧ ಸುಳ್ಳು ಕೇಸ್‌ಗಳನ್ನು ದಾಖಲಿಸಲಾಗುತ್ತದೆ. ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಿಬಿಐ ರೈಡ್ ಮಾಡಲಾಗಿದೆ ಯಾಕೆ? ಇದರ ಹಿಂದಿರುವ ಸಂಚು ಶುಕ್ರವಾರದಂದು ಬಟಾ ಬಯಲು ಮಾಡುತ್ತೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 
 
ದೆಹಲಿ ಮಹಿಳಾ ಆಯೋಗದಲ್ಲಿ ಅವ್ಯವಹಾರ ನಡೆದಿವೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳ, ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆದೇಶದ ಮೇರೆಗೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Murder case: ಓಂ ಪ್ರಕಾಶ್ ಹತ್ಯೆಗೆ ಪ್ಲ್ಯಾನ್ ನಡೆದಿದ್ದು ಈಗಲ್ಲ: ಅಮ್ಮ, ಮಗಳ ಮಾಸ್ಟರ್ ಪ್ಲ್ಯಾನ್ ರಿವೀಲ್

Bengaluru DRDO officer: ಡಿಆರ್ ಡಿಒ ಆಫೀಸರ್ ನ ಅರೆಸ್ಟ್ ಮಾಡಿ ಎಂದ ಕನ್ನಡಿಗರು

Arecanut Price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ಇಲ್ಲಿದೆ ವಿವರ

Gold Price today: ದಾಖಲೆ ಬರೆದ ಚಿನ್ನದ ಬೆಲೆ, ಇಂದಿನ ರೇಟ್ ಕೇಳಿದ್ರೆ ತಲೆ ತಿರುಗುತ್ತೆ

Wing Commander assault: ಸುಳ್ಳು ಕತೆ ಕಟ್ಟಿ ಕನ್ನಡಿಗನನ್ನೇ ಅಪರಾಧಿ ಮಾಡಿದ ವಿಂಗ್ ಕಮಾಂಡರ್ ಗೆ ತಕ್ಕ ಪಾಠ ಕಲಿಸಲು ಮುಂದಾದ ಪೊಲೀಸರು

ಮುಂದಿನ ಸುದ್ದಿ
Show comments