Webdunia - Bharat's app for daily news and videos

Install App

ಝಡ್‌ ಶ್ರೇಣಿ ಭದ್ರತೆ: ತಂದೆಗೆ ಏನಾದ್ರೂ ಆದ್ರೆ ಪ್ರಧಾನಿ ಮೋದಿ ಚರ್ಮ ಸುಲಿಯುತ್ತೇವೆ ಎಂದು ಲಾಲು ಪುತ್ರ

Webdunia
ಸೋಮವಾರ, 27 ನವೆಂಬರ್ 2017 (16:20 IST)
ಕೇಂದ್ರ ಗೃಹಸಚಿವಾಲಯ ಬಿಹಾರ್ ಮಾಜಿ ಸಿಎಂ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಝಡ್‌ ಶ್ರೇಣಿ ಭದ್ರತೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಲಾಲು ಪುತ್ರ ತೇಜ್ ಪ್ರತಾಪ್, ತಂದೆಗೇನಾದ್ರೂ ಅನಾಹುತವಾದಲ್ಲಿ ಪ್ರಧಾನಿ ಮೋದಿಯ ಚರ್ಮ ಸುಲಿಯುತ್ತೇವೆ ಎಂದು ಗುಡುಗಿದ್ದಾರೆ.  
ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರಿಗೆ ನೀಡಲಾಗಿದ್ದ ಎನ್‌ಎಸ್‌ಜಿ ಭದ್ರತೆಯನ್ನು ಹಿಂಪಡೆಯಲಾಗಿದ್ದು, ಸಿಆರ್‌ಪಿಎಫ್‌ ಪಡೆ ಅವರಿಗೆ ಭದ್ರತೆಯನ್ನು ಒದಗಿಸುತ್ತದೆ ಎಂದು ಮೂಲಗಳು ತಿಳಿಸಿವೆ.
 
ಕೇಂದ್ರದ ಗೃಹ ಸಚಿವಾಲಯ ವಿಐಪಿಗಳ ಭದ್ರತೆಯನ್ನು ಪುನರ್ ಪರಿಶೀಲನೆ ನಡೆಸಿದ್ದು, ಕೆಲವರಿಗೆ ನೀಡಲಾದ ಝಡ್‌ ಶ್ರೇಣಿ ಭದ್ರತೆಯನ್ನು ಹಿಂಪಡೆದಿದೆ. ಅಗತ್ಯಕ್ಕೆ ತಕ್ಕಂತೆ ಮಾರ್ಪಾಡು ಮಾಡಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. 
 
ಎನ್‌ಎಸ್‌ಜಿ ಭದ್ರತೆಯನ್ನು ಹಿಂಪಡೆದಿರುವ ಬಗ್ಗೆ ಖಡಕ್ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ತೇಜ್ ಪ್ರತಾಪ್, ತಂದೆಗೆ ಅನಾಹುತವಾದಲ್ಲಿ ಪ್ರಧಾನಿ ಮೋದಿಯವರ ಚರ್ಮ ಸುಲಿಯುತ್ತೇವೆ. ನಮ್ಮ ತಂದೆಯನ್ನು ಹತ್ಯೆ ಮಾಡಲು ಇದೊಂದು ಕೇಂದ್ರ ಸರಕಾರದ ಸಂಚು ಎಂದು ಕಿಡಿಕಾರಿದ್ದಾರೆ.  
 
ತೇಜ್ ಪ್ರತಾಪ್ ಹೇಳಿಕೆಗೆ ಪ್ರತ್ಯುತ್ತರ ನೀಡಿರುವ ಬಿಜೆಪಿ ಮುಖಂಡ ಸುಶೀಲ್ ಮೋದಿ, ಲಾಲು ಯಾದವ್‌ಗೆ ತೊಂದರೆಯಾದಲ್ಲಿ ಕೇಂದ್ರ ಮತ್ತಪ ರಾಜ್ಯ ಸರಕಾರ ಹೊಣೆ ಎನ್ನುವುದು ತಪ್ಪು. ಘಟನೆಗಳು ನಡೆಯುತ್ತಿರುತ್ತವೆ. ಮಾಜಿ ಪ್ರದಾನಿ ಇಂದಿರಾಗಾಂಧಿಗೆ ಭಾರಿ ಭದ್ರತೆಯಿದ್ದರೂ ಹತ್ಯೆಯಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
 
ಬಿಹಾರ್ ಮಾಜಿ ಸಿಎಂ ಜಿತಿನ್ ರಾಮ್ ಮಾಂಜಿ ಎನ್‌ಎಸ್‌ಜಿ ಭದ್ರತೆಯನ್ನು ಹಿಂಪಡೆಯಲಾಗಿದ್ದು, ಸ್ಥಳೀಯ ಪೊಲೀಸರು ಭದ್ರತೆಯನ್ನು ನೀಡಲಿದ್ದಾರೆ.  
 
ಭಧ್ರತೆಯನ್ನು ಹಿಂಪಡೆಯುವ ಕೇಂದ್ರ ಸರಕಾರದ ನಿರ್ಧಾರವನ್ನು ಟೀಕಿಸಿರುವ ಮಾಂಜಿ, ನಾನು ನಕ್ಸಲ್ ಪೀಡಿತ ಪ್ರದೇಶದವನಾಗಿದ್ದರಿಂದ ನನ್ನ ಜೀವಕ್ಕೆ ಬೆದರಿಕೆಯಿದೆ. ಒಂದು ವೇಳೆ ನನ್ನ ಜೀವಕ್ಕೆ ಅಪಾಯವಾದಲ್ಲಿ ಕೇಂದ್ರ ಮತ್ತು ನಿತೀಶ್ ಕುಮಾರ್ ಸರಕಾರವೇ ನೇರ ಹೊಣೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments