Select Your Language

Notifications

webdunia
webdunia
webdunia
webdunia

ಬಿಜೆಪಿ-ಆರೆಸ್ಸೆಸ್ ಸದಸ್ಯರನ್ನು ಕೆಣಕಿದ್ರೆ ಕಣ್ಣುಗಳನ್ನು ಕೀಳುತ್ತೇವೆ: ಬಿಜೆಪಿ ನಾಯಕಿ

ಬಿಜೆಪಿ-ಆರೆಸ್ಸೆಸ್ ಸದಸ್ಯರನ್ನು ಕೆಣಕಿದ್ರೆ ಕಣ್ಣುಗಳನ್ನು ಕೀಳುತ್ತೇವೆ: ಬಿಜೆಪಿ ನಾಯಕಿ
ದುರ್ಗ: , ಸೋಮವಾರ, 16 ಅಕ್ಟೋಬರ್ 2017 (16:14 IST)
ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಸಿಪಿಐ-ಎಂ ಕಾರ್ಯಕರ್ತರು ದೌರ್ಜನ್ಯ ಮುಂದುವರಿಸಿದಲ್ಲಿ ಅವರ ಮನೆಗಳಿಗೆ ನುಗ್ಗಿ ಕಣ್ಣು ಕೀಳುತ್ತೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಗುಡುಗಿದ್ದಾರೆ.
ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಲ್ಲಿ ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಪಿಐ-ಎಂ ಕಾರ್ಯಕರ್ತರು ಮತ್ತೆ ದೌರ್ಜನ್ಯಕ್ಕೆ ಮುಂದಾದಲ್ಲಿ ನಾವು ಅವರ ಮನೆಗಳಿಗೆ ನುಗ್ಗಿ ಅವರ ಕಣ್ಣನ್ನು ತೆಗೆದುಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ.
 
"ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತವೂ ನಾವು 11 ಕೋಟಿ ಸದಸ್ಯರನ್ನು ಹೊಂದಿದ್ದೇವೆ ಮತ್ತು ಕೇರಳದಲ್ಲಿ ವಿವಿಧ ವಯೋಮಾನದ ನಮ್ಮ 300 ಕ್ಕೂ ಹೆಚ್ಚು ಸದಸ್ಯರು ಹತ್ಯೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
 
ಪ್ರಜಾಪ್ರಭುತ್ವದ ಹತ್ಯೆಯಾದರೆ ಅದು ನಮಗೆ ದೊಡ್ಡ ವಿಷಯವಲ್ಲ. ನಾವು ದೇಶವನ್ನು ಆಳುತ್ತಿದ್ದೇವೆ. ಮತ್ತು ನಾವು ಬಯಸಿದರೆ ಕೇರಳ ಸರಕಾರವನ್ನು ವಜಾ ಮಾಡಬಹುದು. ಆದರೆ, ಪ್ರಜಾಪ್ರಭುತ್ವ ಮತ್ತು ಕೇರಳದ ಸರ್ಕಾರದ ಮೇಲೆ ನಂಬಿಕೆ ಹೊಂದಿದ್ದೇವೆ. ಪಶ್ಚಿಮ ಬಂಗಾಳವು ಅದಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಮಮತಾ ಬ್ಯಾನರ್ಜಿ ಯಾವುದೇ ರಾಜಕೀಯ ಪಕ್ಷಪಾತದಿಂದ ಕೆಲಸ ಮಾಡಬಾರದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದೊಂದಿಗೆ ಸೆಣಸಬೇಡಿ, ಬಿಜೆಪಿ, ಆರೆಸ್ಸೆಸ್‌ಗೆ ಸಿಎಂ ವಿಜಯನ್ ತಾಕೀತು