ಬಿಜೆಪಿ ಪರ ನಿಂತ್ರಾ ವಿಂಗ್ ಕಮಾಂಡರ್ ಅಭಿನಂದನ್?

Webdunia
ಮಂಗಳವಾರ, 16 ಏಪ್ರಿಲ್ 2019 (14:13 IST)
ನವದೆಹಲಿ : ಶತ್ರು ಯುದ್ಧ ವಿಮಾನವನ್ನು ಹೊಡೆದುರುಳಿಸುವ ಭರದಲ್ಲಿ ಶತ್ರುಗಳ ಸೆರೆಯಾಗಿ ಹಿಂಸೆ ಅನುಭವಿಸಿ ಮತ್ತೆ ತಾಯ್ನಾಡಿಗೆ ಹಿಂದುರಿಗಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಹೌದು. ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದೆ. ಇದು ವೈರಲ್ ಆಗಿದ್ದು, ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದಾರಾ ಎಂಬ ಅನುಮಾನ ಜನರಲ್ಲಿ ಮೂಡಿತ್ತು.


ಆದರೆ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ತಿಳಿಸಿದ್ದು, ಅಭಿನಂದನ್ ಅವರನ್ನೇ ಹೋಲುವ ಈತನಿಗೆ ಮುಖದಲ್ಲಿನ ವ್ಯತ್ಯಾಸಗಳು ಸ್ಪಷ್ಟವಾಗಿ ಗೋಚರಿಸಬಾರದೆಂಬ ಕಾರಣಕ್ಕೆ ಆತನಿಗೆ ದೊಡ್ಡದಾದ ಕನ್ನಡಕವನ್ನು ಹಾಕಿದ್ದಾರೆ ಎಂದು ಹೇಳಿದೆ.


ಅಷ್ಟೇ ಅಲ್ಲದೇ ಸೇವಾ ನಿಯಮಾವಳಿಗಳ ಪ್ರಕಾರ ಅಧಿಕಾರಿಗಳು ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡುವ ಸಾಧ್ಯತೆಗಳಿಲ್ಲ. ಹೀಗಾಗಿ ಅಭಿನಂದನ್ ಅವರನ್ನು ಹೋಲುವ ವ್ಯಕ್ತಿಯ ಫೋಟೋ ಹಾಕಿ ಅವರೆಂದು ಬಿಂಬಿಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments