Webdunia - Bharat's app for daily news and videos

Install App

ಒಂದೇ ಒಂದು ಗುಂಡು ಹಾರಿಸದೇ ಪಾಕ್ ಶೇರುಪೇಟೆ ಖಲ್ಲಾಸ್

Webdunia
ಗುರುವಾರ, 22 ಸೆಪ್ಟಂಬರ್ 2016 (16:36 IST)
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಉಭಯ ದೇಶಗಳಲ್ಲೂ ಉದ್ರಿಕ್ತ ವಾತಾವರಣ ಉಂಟಾಗಿದೆ. 

ಇದೀಗ ಭಾರತ ಪಾಕ್ ಮೇಲೆ ಯುದ್ಧ ಹೇರಲಿದೆಯೇ ಎನ್ನುವ ಆತಂಕದಿಂದಾಗಿ ಶೇರುಪೇಟೆ ಪಾತಾಳಕ್ಕೆ ಕುಸಿತ ಕಂಡಿದೆ. ಭಾರತ ಒಂದೇ ಒಂದು ಗುಂಡು ಹಾರಿಸದೆ ಶೇರುಪೇಟೆ ಖಲ್ಲಾಸ್ ಮಾಡಿದೆ.
 
ಕರಾಚಿ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.1.41 ರಷ್ಟು ಕುಸಿದ ಕಂಡು 39771.42 ಅಂಕಗಳಿಗೆ ತಲುಪಿದೆ.
 
ದೇಶಿಯ ರಾಜಕೀಯದ ಕಳವಳ ಮತ್ತು ಭಾರತ-ಪಾಕಿಸ್ತಾನದ ಮಧ್ಯೆ ಎದುರಾಗಿರುವ ಉದ್ರಿಕ್ತತೆಯಿಂದ ಶೇರುಪೇಟೆ ಬಾರಿ ಕುಸಿತ ಕಂಡಿದೆ ಎಂದು ಪಾಕ್ ಪತ್ರಿಕೆಗಳು ವರದಿ ಮಾಡಿವೆ. 
 
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿ 18 ಸೈನಿಕರನ್ನು ಕೊಂದ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ರಿಕ್ತ ವಾತಾವರಣ ಉಂಟಾಗಿದೆ.
 
ವಿಶ್ವಸಂಸ್ಥೆಯಲ್ಲಿ ಹೇಳಿಕೆ ನೀಡಿದ ಭಾರತ, ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರವಾಗಿದ್ದು, ಯುದ್ಧಪರಾಧವನ್ನು ಎಸಗುತ್ತಿದೆ. ಪಾಕ್ ಪ್ರಧಾನಿ ನವಾಜ್ ಷರೀಫ್ ವಿಶ್ವಸಂಸ್ಥೆಯಲ್ಲಿ ಹಿಜ್ಬುಲ್ ಕಮಾಂಡರ್ ಬುರ್ಹಾನ್ ವನಿ ಹೆಸರನ್ನು ಬಳಸುವ ಮೂಲಕ ಭಯೋತ್ಪಾದನೆಗೆ ಬೆಂಬಲಿಸುತ್ತಿದೆ ಎನ್ನುವುದನ್ನು ತಾನೇ ಒಪ್ಪಿಕೊಂಡಿದೆ ಎಂದು ಕಿಡಿಕಾರಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments