Webdunia - Bharat's app for daily news and videos

Install App

ನವಜಾತಶಿಶು ಸೇರಿದಂತೆ 9ಮಂದಿಯನ್ನು ಬಲಿ ಪಡೆದ ತೋಳ ಕೊನೆಗೂ ಸೆರೆ

Sampriya
ಗುರುವಾರ, 29 ಆಗಸ್ಟ್ 2024 (18:02 IST)
Photo Courtesy X
ಉತ್ತರಪ್ರದೇಶ: ಬಹ್ರೈಚ್‌ನ ಮಹ್ಸಿ ಪ್ರದೇಶದಲ್ಲಿ ಎಂಟು ಮಕ್ಕಳು ಮತ್ತು ವೃದ್ಧ ಮಹಿಳೆ ಸೇರಿದಂತೆ ಒಂಬತ್ತು ಜನರನ್ನು ಕೊಂದ ತೋಳವನ್ನು ಗುರುವಾರ  ಅರಣ್ಯ ಇಲಾಖೆ ಹಿಡಿದಿದೆ.

ಕೆಲ ದಿನಗಳ ಹಿಂದೆ ತಾಯಿಯ ಮಡಿಲಿಂದ ಶಿಶುವನ್ನು ತೋಳ ಕಿತ್ತುಕೊಂಡು ಹೋಗಿ ಕೊಂದು ಹಾಕಿತ್ತು. ಈ ಘಟನೆ ಬಳಿಕ ಈ ಪ್ರದೇಶದ ಜನರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.  ಇತ್ತೀಚೆಗೆ ಜಿಲ್ಲೆಯಲ್ಲಿ ಇದೇ ರೀತಿ 10ಕ್ಕೂ ಅಧಿಕ ಮಂದಿ ಮೇಲೆ ಈ ತೋಳ ದಾಳಿ ನಡೆಸಿದೆ. ಅದಲ್ಲದೆ ತೋಳ ದಾಳಿಗೆ ಎಂಟು ಮಕ್ಕಳು ಸೇರಿ ಒಂಭತ್ತು ಮಂದಿ ಸಾವನ್ನಪ್ಪಿದ್ದರು.  ಈ ಘಟನೆಯಿಂದ ಸುತ್ತಾ ಮುತ್ತಲಿನ ಜನ ಬೆಚ್ಚಿಬಿದ್ದಿದ್ದು, ತೋಳ ಸೆರೆಹಿಡಿಯಬೇಕೆಂದು ಆಗ್ರಹಿಸಿದ್ದಾರೆ.

ಐದು ಜಿಲ್ಲೆಗಳ ಅರಣ್ಯ ಇಲಾಖೆ ತಂಡಗಳು ತೋಳ ಹಿಡಿಯುವ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು. ಒಟ್ಟು 200 ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕೊನೆಗೆ ಇಲಾಖೆ ಹಾಕಿದ್ದ ಬೋನಿನಲ್ಲಿ ತೋಳ ಸಿಕ್ಕಿಬಿದ್ದಿದೆ.

ವಶಪಡಿಸಿಕೊಂಡ ತೋಳವು ಗಂಡಾಗಿದ್ದು, ಐದು ವರ್ಷದ್ದು ಎನ್ನಲಾಗಿದೆ.  ತೋಳ ಸೆರೆ ಸಿಕ್ಕ ಸುದ್ದಿ ತಿಳಿದ ಗ್ರಾಮಸ್ಥರು ಹಾಗೂ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ಮುಂದಿನ ಸುದ್ದಿ
Show comments