ದೇಶದ ರಾಜಧಾನಿಯಲ್ಲಿ ಅತ್ಯಾಚಾರ ಪ್ರಕರಣಗಳು ನಿಲ್ಲುವಂತೆ ಕಾಣುತ್ತಿಲ್ಲ. ಪ್ರತಿನಿತ್ಯ ಅತ್ಯಾಚಾರದ ವರದಿಗಳು ಜನತೆಯನ್ನು ತೀವ್ರ ಆತಂಕಕ್ಕೀಡು ಮಾಡಿವೆ.
ಇಂದು ಹಾಡಹಗಲೇ 25 ವರ್ಷದ ಮಹಿಳೆಯನ್ನು ಅಪಹರಿಸಿದ ಕಾಮುಕರು ಚಲಿಸುತ್ತಿರುವ ಕಾರಿನಲ್ಲಿಯೇ ಆಕೆಯ ಮೇಲೆ ಗ್ಯಾಂಗ್ರೇಪ್ ಎಸಗಿದ ಘಟನೆ ವಸಂತ ವಿಹಾರ್ನಲ್ಲಿ ನಡೆದಿದೆ.
ಪೊಲೀಸರು ಗ್ಯಾಂಗ್ರೇಪ್ಗೊಳಗಾದ ಮಹಿಳೆಯ ದೂರನ್ನು ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೆಹಲಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳನ್ನು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ದೆಹಲಿಗೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.
ಮೂರು ವರ್ಷಗಳ ಹಿಂದೆ ನಡೆದ ನಡೆದ ನಿರ್ಭಯಾ ಗ್ಯಾಂಗ್ರೇಪ್ ನಂತರ ಕೆಲ ಕಠಿಣ ಕಾನೂನುಗಳನ್ನು ಜಾರಿಗೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ದೆಹಲಿಯಲ್ಲಿ ಶೇ.40 ರಷ್ಟು ಮಹಿಳೆಯರು ಪ್ರತಿನಿತ್ಯ ದೌರ್ಜನ್ಯಕ್ಕೆ ಒಳಗಾಗುತ್ತಾರೆ ಎಂದು ಅಧ್ಯಯನ ವರದಿಯೊಂದು ಬಹಿರಂಗವಾಗಿದೆ.
ನಿರ್ಭಯಾ ಗ್ಯಾಂಗ್ರೇಪ್ ಪ್ರಕರಣದ ನಂತರ ಅತ್ಯಾಚಾರಕ್ಕೆ ನೀಡುತ್ತಿರುವ ಶಿಕ್ಷೆಯನ್ನು ದ್ವಿಗುಣಗೊಳಿಸಿದ್ದರೂ ಅತ್ಯಾಚಾರಗಳ ಸರಣಿ ಮುಂದುವರಿದಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ