Webdunia - Bharat's app for daily news and videos

Install App

ಚಲಿಸುತ್ತಿರುವ ರೈಲಿನಲ್ಲಿಯೇ ಮಹಿಳೆಯ ಮೇಲೆ ಭೀಕರ ಅತ್ಯಾಚಾರ

Webdunia
ಮಂಗಳವಾರ, 13 ಜೂನ್ 2017 (20:36 IST)
ಮುಂಬೈನಿಂದ ಜೈಪುರ್‌ಗೆ ತೆರಳುತ್ತಿದ್ದ 32 ವರ್ಷ ವಯಸ್ಸಿನ ಮಹಿಳೆಯ ಮೇಲೆ ಚಲಿಸುತ್ತಿರುವ ರೈಲಿನಲ್ಲಿಯೇ ರೈಲ್ವೆ ಭೋಜನ ಗೃಹದ ಸಿಬ್ಬಂದಿಯೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ. 
 
ಕಳೆದ ಜೂನ್ 10 ರಂದು ಮುಂಬೈನಿಂದ ಜೈಪುರ ನಗರಕ್ಕೆ ರೈಲಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಸೀಟು ಕೊಡಿಸುವ ಆಮಿಷವೊಡ್ಡಿದ ಆರೋಪಿ ಆಕೆಯನ್ನು ರೈಲ್ವೆಯ ಪ್ಯಾಂಟ್ರಿ ವಿಭಾಗದ ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.  
 
ಗಾಜಿಯಾಬಾದ್ ಮೂಲದ ವಿವಾಹಿತ ಮಹಿಳೆ ಪೊಲೀಸರಿಗೆ ದೂರು ನೀಡಿರುವ ಪ್ರಕಾರ, ಜೂನ್ 9 ರಂದು ಮಹಿಳೆ ಜೈಪುರಕ್ಕೆ ತೆರಳಲು ಬಾಂದ್ರಾದಿಂದ ಅರಾವಳ್ಳಿ ಎಕ್ಸ್‌ಪ್ರೆಸ್‌ ರೈಲು ಹತ್ತಿದ್ದಳು. ರಿಸರ್ವೇಶನ್ ಇರದ ಕಾರಣ ಜನರಲ್ ಕಂಪಾರ್ಟ‌್‌ಮೆಂಟ್‌ನಲ್ಲಿ ನಿಲ್ಲಬೇಕಾಗಿ ಬಂದಿತ್ತು. ಜನರಲ್ ಕಂಪಾರ್ಟ್‌ಮೆಂಟ್ ತುಂಬಿ ತುಳುಕುತ್ತಿದ್ದರಿಂದ ದೂರದ ಜೈಪುರಕ್ಕೆ ಇಂತಹ ಸ್ಥಿತಿಯಲ್ಲಿ ಹೋಗುವುದಾದರೂ ಹೇಗೆ ಎನ್ನುವ ಬಗ್ಗೆ ಆತಂಕಗೊಂಡಿದ್ದಳು ಎನ್ನಲಾಗಿದೆ.   
 
ರೈಲ್ವೆಯ ಭೋಜನಗೃಹದ ಸಿಬ್ಬಂದಿಯೊಬ್ಬನನ್ನು ಸಂಪರ್ಕಿಸಿ ಒಂದು ಸೀಟು ಕೊಡಿಸುವಂತೆ ಮಹಿಳೆ ಮನವಿ ಮಾಡಿದ್ದಾಳೆ. ಆತ ನೀಡಿದ ಭರವಸೆಯನ್ನು ನಂಬಿ ಬಂದಿದ್ದಾಳೆ. ನಂತರ ಮಹಿಳೆಯನ್ನು ಬೆದರಿಸಿದ ಆರೋಪಿ ಆಕೆಯನ್ನು ಭೋಜನಗೃಹದಲ್ಲಿರುವ ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಯಾರಿಗಾದರೂ ಹೇಳಿದಲ್ಲಿ ರೈಲಿನಿಂದ ಹೊರಗೆ ಎಸೆಯುವುದಾಗಿ ಬೆದರಿಸಿದ್ದಾನೆ. ಜೈಪುರ ಬರುವವರೆಗೆ ಮೌನವಾಗಿದ್ದ ಮಹಿಳೆ, ನಂತರ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ.
 
ಮಹಿಳೆ ನೀಡಿದ ದೂರನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಗುರುತಿಸಲಾಗಿದ್ದು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments