ಮಹಿಳೆ ನೇತೃತ್ವದ ಅಭಿವೃದ್ಧಿಯು ನಮ್ಮ ಗುರಿಯಾಗಬೇಕು: ಕೋವಿಂದ್

Webdunia
ಶನಿವಾರ, 2 ಅಕ್ಟೋಬರ್ 2021 (18:12 IST)
ನವದೆಹಲಿ : 'ಒಂದು ದೇಶವಾಗಿ ಮಹಿಳೆಯರ ಅಭಿವೃದ್ಧಿಗಿಂತ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಆದ್ಯತೆ ನೀಡುವುದು ಗುರಿಯಾಗಬೇಕು' ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಅಭಿಪ್ರಾಯಪಟ್ಟರು.

ಕಾನೂನು ಸೇವಾ ಸಂಸ್ಥೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವನ್ನೂ ಪ್ರತಿಪಾದಿಸಿದರು. ಕಾನೂನು ಸೇವೆಗಳ ಪ್ರಾಧಿಕಾರವು ಸಮಾಜದ ತಳ ಸಮುದಾಯಕ್ಕೆ ನೆರವು ನೀಡಲು ವಿಶೇಷ ಪ್ರಯತ್ನಗಳನ್ನು ಮಾಡಬೇಕು ಎಂದು ಹೇಳಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್ಎಎಲ್ಎಸ್ಎ) ಏರ್ಪಡಿಸಿದ್ದ ಆರು ವಾರಗಳ ಅವಧಿಯ 'ಭಾರತದಲ್ಲಿ ಕಾನೂನು ಅರಿವು ಅಭಿಯಾನ' ಉದ್ಘಾಟಿಸಿ ಅವರು ಮಾತನಾಡಿದರು.
'ಒಂದು ದೇಶವಾಗಿ ಮಹಿಳೆಯರ ಅಭಿವೃದ್ಧಿಯಿಂದ ಮಹಿಳಾ ಅಭಿವೃದ್ಧಿಗೆ ಆದ್ಯತೆ ನೀಡುವುದು ನಮ್ಮ ಗುರಿಯಾಗಬೇಕು. ಆದ್ದರಿಂದ ಕಾನೂನು ಸೇವಾ ಸಂಸ್ಥೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಬೇಕಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಮಹಿಳಾ ಫಲಾನುಭವಿಗಳನ್ನು ತಲುಪುವುದು ಸಾಧ್ಯವಾಗಲಿದೆ' ಎಂದು ಕೋವಿಂದ್ ಹೇಳಿದರು.
ನ್ಯಾಯವನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರವು ಒಂದು ಅನುಕರಣೀಯ ಪಾತ್ರ ನಿರ್ವಹಿಸುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದರು.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments