Webdunia - Bharat's app for daily news and videos

Install App

ಸಹೋದರನ ಮುಂದೆ ಯುವತಿಯ ಅತ್ಯಾಚಾರ

ಗುರುಮೂರ್ತಿ
ಗುರುವಾರ, 8 ಫೆಬ್ರವರಿ 2018 (16:14 IST)
23 ವರ್ಷದ ಯುವತಿಯ ಮೇಲೆ ಯುವಕನೋರ್ವನು ಅತ್ಯಾಚಾರ ನಡೆಸಿದ್ದು ಉತ್ತರ ಪ್ರದೇಶದ ಮುಜಾಫರ್‌ನಗರ್‌ದ ಕೊತ್ವಾಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ನಡೆಸಿದ್ದು, ಈ ವೇಳೆಯಲ್ಲಿ ಆಕೆಯ ಬುದ್ದಿಮಾಂಧ್ಯ ಸಹೋದರನ ಮುಂದೆಯೇ ಆರೋಪಿಯು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸಂತ್ರಸ್ತೆಯ ದೂರಿನ ಪ್ರಕಾರ ಕೊತ್ವಾಲಿ ಪೊಲೀಸ್ ಠಾಣಾ ವಲಯದಲ್ಲಿ ಕೆಲವು ಔಷಧಗಳನ್ನು ಖರೀದಿಸಿಕೊಂಡು ಬರಲು ಸಹೋದರನ ಜೊತೆಗೆ ಹೊರಗೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವಳು ಹೇಳಿದ್ದು, ಆರೋಪಿಯಾದ ಮೋನು ತನ್ನ ಮೋಟಾರು ಸೈಕಲ್‌ನಲ್ಲಿ ಅಂಗಡಿಯವರೆಗೂ ಬಿಡುವುದಾಗಿ ಅವರಿಗೆ ಹೇಳಿರುವುದಾಗಿ ತಿಳಿಸಿದ್ದಾಳೆ.
 
ನಂತರ ಅವರನ್ನು ತನ್ನ ಮೋಟಾರು ಸೈಕಲ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಬುದ್ದಿಮಾಂಧ್ಯ ಸಹೋದರನ ಮುಂದೆಯೇ ಅತ್ಯಾಚಾರವೆಸಗಿರುವುದಷ್ಟೇ ಅಲ್ಲ ಈ ವಿಷಯವನ್ನು ಯಾರಿಗಾದೂ ತಿಳಿಸಿದಲ್ಲಿ ತೊಂದರೆ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ದೂರಿಗೆ ಸ್ಪಂದಿಸಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments