Webdunia - Bharat's app for daily news and videos

Install App

ಸಹೋದರನ ಮುಂದೆ ಯುವತಿಯ ಅತ್ಯಾಚಾರ

ಗುರುಮೂರ್ತಿ
ಗುರುವಾರ, 8 ಫೆಬ್ರವರಿ 2018 (16:14 IST)
23 ವರ್ಷದ ಯುವತಿಯ ಮೇಲೆ ಯುವಕನೋರ್ವನು ಅತ್ಯಾಚಾರ ನಡೆಸಿದ್ದು ಉತ್ತರ ಪ್ರದೇಶದ ಮುಜಾಫರ್‌ನಗರ್‌ದ ಕೊತ್ವಾಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ನಡೆಸಿದ್ದು, ಈ ವೇಳೆಯಲ್ಲಿ ಆಕೆಯ ಬುದ್ದಿಮಾಂಧ್ಯ ಸಹೋದರನ ಮುಂದೆಯೇ ಆರೋಪಿಯು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸಂತ್ರಸ್ತೆಯ ದೂರಿನ ಪ್ರಕಾರ ಕೊತ್ವಾಲಿ ಪೊಲೀಸ್ ಠಾಣಾ ವಲಯದಲ್ಲಿ ಕೆಲವು ಔಷಧಗಳನ್ನು ಖರೀದಿಸಿಕೊಂಡು ಬರಲು ಸಹೋದರನ ಜೊತೆಗೆ ಹೊರಗೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವಳು ಹೇಳಿದ್ದು, ಆರೋಪಿಯಾದ ಮೋನು ತನ್ನ ಮೋಟಾರು ಸೈಕಲ್‌ನಲ್ಲಿ ಅಂಗಡಿಯವರೆಗೂ ಬಿಡುವುದಾಗಿ ಅವರಿಗೆ ಹೇಳಿರುವುದಾಗಿ ತಿಳಿಸಿದ್ದಾಳೆ.
 
ನಂತರ ಅವರನ್ನು ತನ್ನ ಮೋಟಾರು ಸೈಕಲ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಬುದ್ದಿಮಾಂಧ್ಯ ಸಹೋದರನ ಮುಂದೆಯೇ ಅತ್ಯಾಚಾರವೆಸಗಿರುವುದಷ್ಟೇ ಅಲ್ಲ ಈ ವಿಷಯವನ್ನು ಯಾರಿಗಾದೂ ತಿಳಿಸಿದಲ್ಲಿ ತೊಂದರೆ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ದೂರಿಗೆ ಸ್ಪಂದಿಸಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments