Webdunia - Bharat's app for daily news and videos

Install App

ಘೋರ: ಸಹೋದರಿಯ ಕಣ್ಣುಗುಡ್ಡೆ ಕಿತ್ತು, ಪಾದ ಕತ್ತರಿಸಿದ ಸಹೋದರರು

Webdunia
ಗುರುವಾರ, 3 ನವೆಂಬರ್ 2016 (14:49 IST)
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಘೋರಾತಿಘೋರ ಕೃತ್ಯವೊಂದು ನಡೆದಿದೆ. ಸಹೋದರರೆಲ್ಲ ಸೇರಿ ತಮ್ಮ ಸ್ವಂತ ಸಹೋದರಿಯ ಕಣ್ಣುಗುಡ್ಡೆ ಕಿತ್ತು ಪಾದವನ್ನು ಕತ್ತರಿಸಿ ಹಾಕಿದ್ದಾರೆ.
ಲಾಹೋರ್‌ದಿಂದ 400 ಕೀಲೋಮೀಟರ್ ದೂರದಲ್ಲಿರುವ ಮುಝಫ್ಪರ್ ನಗರದಲ್ಲಿ ಬುಧವಾರ ಈ ಹೇಯ ಕೃತ್ಯ ನಡೆದಿದ್ದು ತಮ್ಮ ಸಹೋದರಿಯನ್ನು ಅಪಹರಿಸಿದ ಇಬ್ಬರು ಸಹೋದರರು ಹರಿತವಾದ ಚಾಕುವಿನಿಂದ ಈ ಪೈಶಾಚಿಕತೆಯನ್ನು ಮೆರೆದಿದ್ದಾರೆ.
 
ತಮ್ಮ ಮಗಳನ್ನು ಆಕೆ ಅಪಹರಿಸಿದ್ದಾಳೆ ಎಂಬ ಶಂಕೆಯಲ್ಲಿ ಈ ಕೃತ್ಯವನ್ನೆಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ತನ್ನ ಸಹೋದರಿ ಮೇಲೆ ಪೊಲೀಸ್ ಠಾಣೆಯಲ್ಲಿ ದೂರನ್ನಿತ್ತಿದ್ದ. ಆದರೆ ಬಾಲಕಿ ಪತ್ತೆಯಾಗಿರಲಿಲ್ಲ. ಹೀಗಾಗಿ ತನ್ನ ಸಹೋದರಿಯ ಮೇಲೆ ಸೇಡನ್ನು ತೀರಿಸಿಕೊಳ್ಳಲು ಈ ದುಷ್ಕೃತ್ಯವನ್ನೆಸಗಿದ್ದಾರೆ. ಅವರು ನನ್ನ ತಾಯಿಯನ್ನು ಕೊಲ್ಲ ಬಯಸಿದ್ದರು ಎಂದು ಪೀಡಿತ ಮಹಿಳೆಯ ಪುತ್ರಿ ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ಹೇಳಿದ್ದಾಳೆ. 
 
ಮಹಿಳೆಯನ್ನೀಗ ಮುಲ್ತಾನ್‌ನಲ್ಲಿರುವ ನಿಶ್ತಾರ್ ಆಸ್ಪತ್ರೆಗೆ ಸೇರಿಸಲಾಗಿದ್ದು ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆದರೆ ಇದುವರೆಗೂ ಯಾರನ್ನು ಬಂಧಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments