ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿರೋಧ ಒಡ್ಡಿದ ಕಾರಣಕ್ಕೆ 30 ವರ್ಷದ ಮಹಿಳೆಗೆ ಯುವಕನೊಬ್ಬ ಬೆಂಕಿ ಹಚ್ಚಿದ ಪ್ರಕರಣ ಮುಜಪ್ಫರ್ನಗರದ ಸಿಸೊಲಿಯಲ್ಲಿ ನಡೆದಿದೆ. ತೀವೃ ಸುಟ್ಟ ಗಾಯಗಳೊಂದಿಗೆ ಬಳಲುತ್ತಿರುವ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೀಡಿತೆ ಬ್ಯಾಂಕ್ ಉದ್ಯೋಗಿಯೊಬ್ಬರ ಪತ್ನಿಯಾಗಿದ್ದು, ಆಕೆ ಮನೆಯಲ್ಲಿ ಒಬ್ಬಳೇ ಇದ್ದಾಗ ಅಲ್ಲಿಗೆ ಬಂದ ಆರೋಪಿ ಶಿವಕುಮಾರ್ ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಆದರೆ ಆಕೆ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ಕೆರಳಿದ ಆರೋಪಿ ಆಕೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಪ್ರಿಯದರ್ಶಿ ತಿಳಿಸಿದ್ದಾರೆ.
ನಾಪತ್ತೆಯಾಗಿರುವ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.