Webdunia - Bharat's app for daily news and videos

Install App

ವಿವಾಹ ಪ್ರಸ್ತಾಪ ತಿರಸ್ಕರಿಸಿದ ಯುವತಿಯ ಸಜೀವ ದಹನ

Webdunia
ಸೋಮವಾರ, 25 ಸೆಪ್ಟಂಬರ್ 2017 (15:19 IST)
ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ 18ರ ಯುವತಿಯನ್ನು ಸಜೀವವಾಗಿ ದಹಿಸಿದ ಭೀಕರ ಘಟನೆ ರಾಜಸ್ಥಾನದ ಬನ್ಸಾವರ್‌ ಜಿಲ್ಲೆಯ ಇಸರ್ವಿಯಾ ಪಟ್ಟಣದಲ್ಲಿ ನಡೆದಿದೆ.
ವಿವಾಹವಾಗಲು ಬಯಸಿದ್ದ ಆರೋಪಿ ಯುವಕ ರವಿ ಮತ್ತು ಆತನ ತಂದೆ ಮನೆಯಲ್ಲಿಯೇ ಯುವತಿ ಸೀಮಾಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಶೇ.75 ರಷ್ಟು ಸುಟ್ಟ ಗಾಯಗಳೊಂದಿಗೆ ಸೀಮಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಯುವತಿ ಸೀಮಾ ತಂದೆಯ ಪ್ರಕಾರ, ರವಿ ಎನ್ನುವ ವ್ಯಕ್ತಿ ಸೀಮಾಳನ್ನು ವಿವಾಹವಾಗುವ ಪ್ರಸ್ತಾಪವನ್ನು ಮುಂದಿಟ್ಟಿದ್ದ. ಆದರೆ, ಆತನ ವಿವಾಹ ಪ್ರಸ್ತಾಪವನ್ನು ಸೀಮಾ ತಿರಸ್ಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ರವಿ ಮತ್ತು ಆತನ ತಂದೆ ಸೀಮಾಳನ್ನು ಜೀವಂತವಾಗಿ ದಹಿಸಿದ್ದಾರೆ ಎಂದು ತಿಳಿಸಿದ್ದಾರೆ. 
 
ಆರೋಪಿ ರವಿಯ ಕಿರುಕುಳ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಆದರೆ. ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ ಎಂದು ಯುವತಿಯ ತಂದೆ ಆರೋಪಿಸಿದ್ದಾನೆ. 
 
ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments