Webdunia - Bharat's app for daily news and videos

Install App

ಪೋಲಿಸಪ್ಪನಿಗೆ ಬಿತ್ತು ಮಹಿಳೆಯಿಂದ ಚಪ್ಪಲಿ ಏಟು.....! ವೈರಲ್ ಆಗಿದೆ ವೀಡಿಯೊ

ಗುರುಮೂರ್ತಿ
ಮಂಗಳವಾರ, 6 ಫೆಬ್ರವರಿ 2018 (16:27 IST)
ಇತ್ತೀಚಿಗೆ ದೇಶದೆಲ್ಲೆಡೆ ಮಹಿಳೆಯರ ಮೇಲಿನ ಅತ್ಯಾಚಾರ, ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಹಾಡಹಗಲೇ ಕರ್ತವ್ಯ ನಿರತ ಪೊಲೀಸ್ ಒಬ್ಬರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದು, ಇದರಿಂದ ಕೋಪಗೊಂಡ ಮಹಿಳೆ ಪೊಲೀಸಪ್ಪನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಹರಿಯಾಣಾದಲ್ಲಿ ಬೆಳಕಿಗೆ ಬಂದಿದೆ. ಅದರ ಕುರಿತಾದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಪೊಲೀಸ್ ಇಲಾಖೆಯ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.
ಇತ್ತೀಚಿಗೆ ಹರಿಯಾಣದಲ್ಲಿ ನೆಡೆದಿರುವ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಪೊಲೀಸರೊಬ್ಬರು ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿರುವುದು ಬಾರಿ ಟೀಕೆಗೆ ಗುರಿಯಾಗಿದೆ. ಅಷ್ಟೇ ಅಲ್ಲ, ಹರಿಯಾಣ ಪೊಲೀಸರು ಜನವರಿ ತಿಂಗಳಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ತನಿಖೆ ನಡೆಸುತ್ತಿದ್ದು ಈ ಘಟನೆಯಿಂದ ಸ್ವತಃ ಹರಿಯಾಣ ಪೊಲೀಸರೇ ತಲೆ ತಗ್ಗಿಸುವ ಸ್ಥಿತಿ ಇದೀಗ ನಿರ್ಮಾಣವಾಗಿದೆ.
 
ಈ ಘಟನೆ ನಡೆದ ಸಂದರ್ಭದಲ್ಲಿ ಈ ಪೊಲೀಸ್ ಮಹಾಶಯ ಮಧ್ಯಪಾನ ಮಾಡಿದ್ದು ನಿಲ್ಲಲೂ ಆಗದಿರುವಂತ ಸ್ಥಿತಿಯಲ್ಲಿರುವುದು ಮತ್ತು ಆ ಸಮಯದಲ್ಲಿ ತಮ್ಮನ್ನು ತಾವು ಸಮರ್ಥಿಸಿಕೊಳ್ಳಲು ವಿಫಲರಾಗಿರುವುದನ್ನು ನಾವು ಈ ವೀಡಿಯೊದಲ್ಲಿ ಕಾಣಬಹುದಾಗಿದೆ.
 
ಈ ಘಟನೆ ನಡೆದ ಸಂದರ್ಭದಲ್ಲಿ ಸಾಕಷ್ಟು ಜನರು ಸೇರಿದ್ದು ಇನ್ನು ಮುಂದೆ ಈ ತರಹದ ಅನುಚಿತ ವರ್ತನೆ ತೋರದಂತೆ ಪೊಲೀಸಪ್ಪನಿಗೆ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಈ ಘಟನೆಯು ಹರಿಯಾಣಾ ರಾಜ್ಯದ ಹಿಸಾರ್ ಜಿಲ್ಲೆಯ 4 ನೇ ವಲಯದಲ್ಲಿ ನೆಡೆದಿದ್ದು, ಈ ಘಟನೆ ವೇಳೆ ಅಲ್ಲಿದ್ದ ಸ್ಥಳೀಯರು ಈ ಎಲ್ಲಾ ಘಟನೆಯನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಚಿತ್ರಿಸಿದ್ದಾರೆ ಎನ್ನಲಾಗಿದೆ.
 
ಇದೀಗ ಅದೇ ವೀಡಿಯೊ ಜಾಲತಾಣಗಳಲ್ಲಿ ವೈರಲ್ ‌ಆಗಿದ್ದು, ಸ್ಥಳೀಯ ವರದಿಗಳ ಪ್ರಕಾರ ಈ ವೀಡಿಯೊದಲ್ಲಿರುವುದು ಹರಿಯಾಣಾ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಡ್ ಕಾನ್ಟೇಬಲ್ ಎಂದು ಹೇಳಲಾಗಿದೆ.
 
ಒಟ್ಟಿನಲ್ಲಿ ಸಮಾಜದ ಒಳಿತನ್ನು ಕಾಪಾಡಬೇಕಾದ ಪೋಲಿಸರೇ ಇಂತಹ ಹೀನ ಕೃತ್ಯಕ್ಕೆ ಇಳಿದಿರುವುದು ಬೇಲಿಯೇ ಎದ್ದು ಹೊಲವನ್ನು ಮೇಯ್ದ ಹಾಗಿದೆ ಎಂಬುದು ಮಾತ್ರ ಗಮನಾರ್ಹ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

ಮುಂದಿನ ಸುದ್ದಿ
Show comments