Webdunia - Bharat's app for daily news and videos

Install App

ರೇಪ್ ಎಸಗಿದಾತನ ಶಿಶ್ನವನ್ನೇ ಕತ್ತರಿಸಿ ಸೇಡು ತೀರಿಸಿಕೊಂಡ ಯುವತಿ

Webdunia
ಶುಕ್ರವಾರ, 1 ಆಗಸ್ಟ್ 2014 (12:55 IST)
ಬಿಹಾರದ ಮಾದೇಪುರ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಜ್ಯೋತಿಷಿಯ ಶಿಶ್ನವನ್ನೇ ಕತ್ತರಿಸಿ ಸೇಡು ತೀರಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
 
ಯುವತಿ ತನ್ನ ಸಮಸ್ಯೆ ಪರಿಹಾರಕ್ಕಾಗಿ ಜ್ಯೋತಿಷಿ ಮಹೇಂದ್ರ(35)ನ ಬಳಿಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಅತ್ಯಾಚಾರ ಆರೋಪದ ಮೇಲೆ ಕಾಮುಕ ಜ್ಯೋತಿಷಿಯನ್ನು ಮಾದೇಪುರ ಪೊಲೀಸರು ಬಂಧಿಸಿದ್ದಾರೆ.
 
ಜ್ಯೋತಿಷಿಯಿಂದ ಅತ್ಯಾಚಾರಕ್ಕೆ ಒಳಗಾದ ಯುವತಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಅನಾರೋಗ್ಯಕ್ಕೆ ಯಾರೋ ಮಾಟ ಮಾಡಿಸಿದ್ದಾರೆ ಎಂದು ಭಾವಿಸಿ ಯುವತಿಯ ತಾಯಿ ಆಕೆಯನ್ನು ಜ್ಯೋತಿಷಿಯ ಬಳಿ ತೆರಳಲು ಸೂಚಿಸಿದ್ದಾಳೆ. ತಾಯಿಯ ಸೂಚನೆಯಂತೆ ಯುವತಿ ಕಳೆದ ಜುಲೈ 1ರಂದು ಪರಿಹಾರಕ್ಕಾಗಿ ಜ್ಯೋತಿಷಿಯ ಮನೆಗೆ ತೆರಳಿದ್ದಾಳೆ. ಈ ವೇಳೆ ಜ್ಯೋತಿಷಿ ಪರಿಹಾರ ನೀಡುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
 
ರೇಪ್‌ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವತಿ ಮರುದಿನ ರಾತ್ರಿ ಜ್ಯೋತಿಷಿಯ ಮನೆಗೆ ಮೊಬೈಲ್‌ ಮತ್ತು ಹರಿತವಾದ ಚಾಕುವಿನೊಂದಿಗೆ ತೆರಳಿದ್ದು, ಜ್ಯೋತಿಷಿಯ ಶಿಶ್ನವನ್ನೇ ಚಾಕುವಿನಿಂದ ಕತ್ತರಿಸಿ ಹಾಕಿದ್ದಾಳೆ. ಈ ಸಂದರ್ಭದ ಮಾತುಕತೆಯನ್ನು ಮೊಬೈಲ್‌ಲ್ಲಿ ರೆಕಾರ್ಡ್ ಮಾಡಿದ್ದಾಳೆ. ನಡೆದ ಘಟನೆಯನ್ನು ಆಕೆ ಪೋಷಕರಲ್ಲಿ ಹೇಳಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ದೂರು ಸ್ವೀಕರಿಸದ ಪೊಲೀಸರು ಸಂಧಾನ ನಡೆಸಿದ್ದಾರೆ. 
 
ಈ ಸಂದರ್ಭದಲ್ಲಿ ದೂರು ನೀಡಿದರೆ ಕೊಲೆ ಮಾಡುವುದಾಗಿ ಜ್ಯೋತಿಷಿ ಕಡೆಯವರು ಯುವತಿಗೆ ಬೆದರಿಕೆ ಹಾಕಿದ್ದಾರೆ. ಕೊನೆಗೆ ರಾಜಕೀಯ ನಾಯಕರು ಪ್ರವೇಶವಾಗಿ ಪೊಲೀಸ್‌ ಠಾಣೆಯಲ್ಲಿ ಜು.30ರಂದು ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಮಾಡುತ್ತಿದ್ದು, ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಕೊಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments