Webdunia - Bharat's app for daily news and videos

Install App

ಮಹಿಳೆಯರು ದೇವಾಲಯಕ್ಕೆ ಹೋಗುವ ಅಗತ್ಯವಿಲ್ಲ, ಮನೆಯಲ್ಲಿ ಪೂಜೆ ಮಾಡಿದ್ರೆ ಸಾಕು; ಬಿಜೆಪಿ ಸಚಿವ

Webdunia
ಶುಕ್ರವಾರ, 29 ಜನವರಿ 2016 (19:14 IST)
ಶನಿ ಶಿಂಗ್ಣಾಪುರ್ ಮತ್ತು ಹಾಜಿ ಅಲಿ ದರ್ಗಾ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಪ್ರತಿಭಟನೆಗಳು ನಡೆದಿರುವ ಮಧ್ಯೆಯೇ, ಮಧ್ಯಪ್ರದೇಶದ ಗೃಹ ಸಚಿವ ಬಾಬುಲಾಲ್ ಗೌರ್ , ಮಹಿಳೆಯರು ಮನೆಯಲ್ಲಿ ದೇವರಿಗೆ ಕೈಮುಗಿದರೆ ಸಾಕು ದೇವಸ್ಥಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.  
 
ಮಹಾರಾಷ್ಟ್ರದಲ್ಲಿ ಶನಿ ಶಿಂಗ್ಣಾಪುರ್ ದೇವಸ್ಥಾನದ ಪ್ರವೇಶಕ್ಕೆ ಒತ್ತಾಯಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ಕುರಿತಂತೆ ಸುದ್ದಿಗಾರರು ಸಚಿವ ಬಾಬುಲಾಲ್ ಗೌರ್ ಅವರಿಗೆ ಪ್ರತಿಕ್ರಿಯೆ ಕೇಳಿದಾಗ, ಮಹಿಳೆಯರು ಮನೆಯಲ್ಲಿ ದೇವರಿಗೆ ಕೈಮುಗಿದರೆ ಸಾಕು ಎಂದು ಹೇಳಿದ್ದಾರೆ.  
 
ಮಹಾರಾಷ್ಟ್ರದ ಹಲವು ಜಿಲ್ಲೆಗಳಿಂದ ಬಂದ 1500 ಕ್ಕೂ ಹೆಚ್ಚು ಮಹಿಳೆಯರು ಶನಿ ಶಿಂಗ್ಣಾಪುರ್ ದೇವಸ್ಥಾನದೊಳಗೆ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. 
 
ಕಳೆದ ಹಲವು ಶತಮಾನಗಳಿಂದ ದೇವಾಲಯದೊಳಗೆ ಮಹಿಳೆಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಸೋನೈ ಎನ್ನುವ ಚಿಕ್ಕ ಗ್ರಾಮದಲ್ಲಿರುವ ದೇವಾಲಯಕ್ಕೆ ಲಕ್ಷಾಂತರ ಪ್ರವಾಸಿಗರು ದೇಶ ವಿದೇಶಗಳಿಂದ ಆಗಮಿಸುತ್ತಾರೆ.
 
ಶನಿ ಶಿಂಗ್ಣಾಪುರದಲ್ಲಿರುವ ರಾಷ್ಟ್ರೀಯ ಬ್ಯಾಂಕ್‌ಗಳು ಕೂಡಾ ತಮ್ಮ ಬಾಗಿಲುಗಳನ್ನು ಸದಾ ತೆರೆದಿಟ್ಟಿರುತ್ತವೆ.ಯಾವತ್ತೂ ಬಾಗಿಲುಗಳಿಗೆ ಬೀಗ ಹಾಕುವುದಿಲ್ಲ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments