Webdunia - Bharat's app for daily news and videos

Install App

ಸುಬ್ರಹ್ಮಣ್ಯಂ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆಗೆ ವೆಂಕಯ್ಯನಾಯ್ಡು ನಕಾರ

Webdunia
ಬುಧವಾರ, 22 ಜೂನ್ 2016 (20:45 IST)
ಪ್ರಧಾನಮಂತ್ರಿಯವರ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಂ ಅವರನ್ನು ವಜಾಗೊಳಿಸಬೇಕು ಎನ್ನುವ ಬಿಜೆಪಿ ಮುಖಂಡ ಸುಬ್ರಮಣ್ಯಂ ಸ್ವಾಮಿ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
 
ಇದಕ್ಕಿಂತ ಮೊದಲು ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಮೇಲೆ ಸರಕಾರಕ್ಕೆ ಸಂಪೂರ್ಣ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿಕೆ ನೀಡಿದ ಮಾರನೇ ದಿನವೇ ಅವರನ್ನು ಕೇಂದ್ರ ಸರಕಾರ ವಜಾಗೊಳಿಸಬೇಕು ಎಂದು ಸ್ವಾಮಿ ಒತ್ತಾಯಿಸಿದ್ದಾರೆ. 
 
ಒಂದು ವೇಳೆ ಬಿಜೆಪಿ ಅಥವಾ ಕೇಂದ್ರ ಸರಕಾರ ಯಾವುದೇ ಹೇಳಿಕೆ ನೀಡಿದ್ದರೆ ಅದಕ್ಕೆ ಪ್ರತಿಕ್ರಿಯೆ ನೀಡುತ್ತೇನೆ. ಸ್ವಾಮಿ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
 
ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಜನತೆ ತಮಗೆ ತೋಚಿದ್ದನ್ನು ಹೇಳುತ್ತಾರೆ. ಪ್ರತಿಯೊಬ್ಬರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು. 
 
ಕಳೆದ ಆಕ್ಟೋಬರ್ 2014ರಲ್ಲಿ ಅರವಿಂದ್ ಸುಬ್ರಹ್ಮಣ್ಯಂ ಮುಖ್ಯ ಆರ್ಥಿಕ ಸಲಹೆಗಾರರಾಗಿ ಮೋದಿ ಸರಕಾರ ನೇಮಕ ಮಾಡಿತ್ತು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ: ಸಿದ್ದರಾಮಯ್ಯ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೈರತಿ ಬಸವರಾಜು ವಿರುದ್ಧ ಪೊಲೀಸರೇ ಹೆಸರು ಸೇರಿಸಿಕೊಂಡಿದ್ದಾರೆ: ಆರ್ ಅಶೋಕ್

ಮುಂದಿನ ಸುದ್ದಿ
Show comments