Webdunia - Bharat's app for daily news and videos

Install App

ಕೋವ್ಯಾಕ್ಸಿನ್ ಲಸಿಕೆಗೆ ಇನ್ನೂ ಸಿಕ್ಕಿಲ್ಲ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ

Webdunia
ಮಂಗಳವಾರ, 28 ಸೆಪ್ಟಂಬರ್ 2021 (14:17 IST)
ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಸಿಗಬೇಕಿದ್ದ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆಯು ಮತ್ತೊಮ್ಮೆ ತಡವಾಗಿದೆ.
Photo Courtesy: Google

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಉತ್ಪಾದಿಸಿರುವ ಕೋವ್ಯಾಕ್ಸಿನ್ ಅನ್ನು ಇನ್ನಷ್ಟು ತಾಂತ್ರಿಕ ಪರೀಕ್ಷೆಗಳಿಗೆ ಕಳುಹಿಸಲಾಗಿದೆ. ಕೋವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮತಿ ಪಡೆಯಲು ಅಗತ್ಯವಿರುವ ಎಲ್ಲಾ ದತ್ತಾಂಶಗಳನ್ನು ಪೂರೈಸಿದ ಬಳಿಕವೂ ಹೀಗೆ ಆಗಿದೆ ಎಂದು ಭಾರತ್ ಬಯೋಟೆಕ್ ತಿಳಿಸಿದೆ.
"ಇದು ಸಾಮಾನ್ಯವಾದ ಪ್ರಕ್ರಿಯೆ. ತಜ್ಞರು ಕೇಳುವ ಪ್ರಶ್ನೆಗಳಿಗೆ ಕಂಪನಿಗಳು ಉತ್ತರಿಸಬೇಕು," ಎಂದು ಹೆಸರು ಹೇಳಲಿಚ್ಛಿಸದ, ವಿಷಯವನ್ನು ಹತ್ತಿರದಿಂದ ಬಲ್ಲ, ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಶ್ವ ಸಂಸ್ಥೆಯಿಂದ ತುರ್ತು ಬಳಕೆ ಅನುಮತಿ ಇಲ್ಲದೇ ಇದ್ದ ಸಂದರ್ಭದಲ್ಲಿ ಬಹುತೇಕ ದೇಶಗಳು ಕೋವ್ಯಾಕ್ಸಿನ್ ಅನ್ನು ಮಾನ್ಯ ಮಾಡದ ಕಾರಣ ಈ ಲಸಿಕೆ ಪಡೆದ ಭಾರತೀಯರಿಗೆ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ತೊಡಕಾಗಲಿದೆ.
ಭಾರತ್ ಬಯೋಟೆಕ್ನ ದತ್ತಾಂಶದ ಪ್ರಕಾರ ಕೋವ್ಯಾಕ್ಸಿನ್ನ ಮೂರನೇ ಹಂತದ ಪ್ರಯೋಗವು 77.8% ಪ್ರಭಾವಶಾಲಿಯಾಗಿದೆ. ಇಲ್ಲಿವರೆಗೂ ಫೈಜ಼ರ್-ಬಯೋಎನ್ಟೆಕ್, ಜಾನ್ಸನ್ & ಜಾನ್ಸನ್, ಮೊಡೆರ್ನಾ, ಚೀನಾದ ಸಿನೋಫಾರ್ಮ್ ಮತ್ತು ಆಕ್ಸ್ಫರ್ಡ್-ಅಸ್ಟ್ರಾಜ಼ೆಂಕಾ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಮಾತ್ರವೇ ವಿಶ್ವ ಸಂಸ್ಥೆ ತುರ್ತು ಬಳಕೆಗೆ ಅನುಮತಿ ಕೊಟ್ಟಿದೆ.
ಭಾರತ ಮದ್ದು ನಿಯಂತ್ರಣ ಪ್ರಾಧಿಕಾರದಿಂದ ತುರ್ತು ಬಳಕೆ ಅನುಮತಿ ಪಡೆದ ಆರು ಲಸಿಕೆಗಳಲ್ಲಿ ಕೋವ್ಯಾಕ್ಸಿನ್ ಒಂದಾಗಿದೆ. ಇದರೊಂದಿಗೆ ಕೋವಿಶೀಲ್ಡ್ ಹಾಗೂ ರಷ್ಯಾದ ಸ್ಪುಟ್ನಿಕ್ ಗಿ ಲಸಿಕೆಗಳೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಬಳಕೆಯಾಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments