ಲಡ್ಡು ವಿವಾದದ ಬಳಿಕ ತಿರುಪತಿ ಪ್ರಸಾದದಲ್ಲಿ ಹುಳ ಪತ್ತೆ: ಭಕ್ತರ ಆರೋಪ

Krishnaveni K
ಭಾನುವಾರ, 6 ಅಕ್ಟೋಬರ್ 2024 (11:53 IST)
ತಿರುಪತಿ: ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂಬ ಆರೋಪಗಳ ಬಳಿಕ ಈಗ ಪ್ರಸಾದ ಭೋಜನದ ಬಗ್ಗೆಯೂ ಆರೋಪ ಕೇಳಿಬಂದಿದೆ.

ತಿರುಪತಿ ದೇವಾಲಯದಲ್ಲಿ ಭಕ್ತರಿಗೆ ನೀಡಲಾಗಿದ್ದ ಅನ್ನ ಪ್ರಸಾದದಲ್ಲಿ ಹುಳ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಫೋಟೋ ಸಮೇತ ಆರೋಪ ಮಾಡಿದ್ದಾರೆ. ಈ ಬಗ್ಗೆ ತಿರುಪತಿ ಆಡಳಿತ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಅವರ ಪ್ರತಿಕ್ರಿಯೆ ಆಘಾತಕಾರಿಯಾಗಿತ್ತು ಎಂದಿದ್ದಾರೆ.

ಪ್ರಸಾದ ರೂಪದಲ್ಲಿ ನೀಡಲಾಗಿದ್ದ ಮೊಸರನ್ನದಲ್ಲಿ ಹುಳಗಳು ಪತ್ತೆಯಾಗಿವೆ. ಈ ಬಗ್ಗೆ ಸಿಬ್ಬಂದಿಗಳ ಗಮನಕ್ಕೆ ತಂದಾಗ ಇದೆಲ್ಲಾ ಮಾಮೂಲು. ಸರ್ಕಾರಗಳು ಬದಲಾದರೂ ಇಂತಹ ಸಮಸ್ಯೆಗಳು ಇರುತ್ತವೆ ಎಂದಿರುವುದಾಗಿ ಭಕ್ತರು ಆರೋಪಿಸಿದ್ದಾರೆ. ಆದರೆ ಹುಳ ಪತ್ತೆಯಾಗಿರುವುದನ್ನು ತಿರುಪತಿ ತಿರುಮಲ ಟ್ರಸ್ಟ್ ಅಧಿಕಾರಿಗಳು ಅಲ್ಲಗಳೆದಿದ್ದಾರೆ.

ಈಗಾಗಲೇ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ನೋವಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಸ್ವತಂತ್ರ ತನಿಖಾ ತಂಡ ರಚಿಸಲು ಆದೇಶಿಸಿತ್ತು. ಅದರ ನಡುವೆಯೇ ಈಗ ಅನ್ನಪ್ರಸಾದದಲ್ಲೂ ಹುಳ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಬರುವ ಭಕ್ತರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments