Webdunia - Bharat's app for daily news and videos

Install App

ಬ್ರಿಜ್‌ಭೂಷಣ್‌ ಬಂಧನಕ್ಕೆ ಗಡುವು ನೀಡಿದ ಕುಸ್ತಿಪಟುಗಳು

Webdunia
ಸೋಮವಾರ, 8 ಮೇ 2023 (10:39 IST)
ನವದೆಹಲಿ : ಇಲ್ಲಿನ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಮೇ 21ರ ಒಳಗೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರೂ ಆಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ನನ್ನ ಬಂಧಿಸುವಂತೆ ಗಡುವು ನೀಡಿದ್ದಾರೆ.
 
ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಹಾಗೂ ಸಾಕ್ಷಿ ಮಲಿಕ್ ಸೇರಿ 31 ಸದಸ್ಯರನ್ನೊಳಗೊಂಡ ಕುಸ್ತಿಪಟುಗಳ ಸಮಿತಿ ಮೇ 21ರ ಒಳಗೆ ಬಂಧಿಸದಿದ್ದರೆ ಮಹತ್ವದ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್, ಖಾಪ್ ಮಹಮ್ 24 ಮುಖ್ಯಸ್ಥ ಮೆಹರ್ ಸಿಂಗ್ ಮತ್ತು ಸಂಕ್ಯುತ್ ಕಿಸ್ನಾ ಮೋರ್ಚಾದ (ರಾಜಕೀಯೇತರ) ಬಲದೇವ್ ಸಿಂಗ್ ಸಿರ್ಸಾ ಅವರೂ ಸಹ ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ನಂತರ ಅಖPಅ ಸೆಕ್ಷನ್ 161 ಹಾಗೂ 164 ಅಡಿಯಲ್ಲಿ ಸಂತ್ರಸ್ತರ ಹೇಳಿಕೆಗಳನ್ನ ದಾಖಲಿಸಲಾಗಿದೆ. ಆದ್ರೆ ಈವರೆಗೆ ಬಂಧಿಸುವ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಮೇ 21ರ ಒಳಗೆ ಬ್ರಿಜ್ ಭೂಷಣ್ನನ್ನ ಬಂಧಿಸದಿದ್ದರೆ ಪ್ರತಿಭಟನೆ ಇನ್ನೂ ದೊಡ್ಡದಾಗಲಿದೆ ಎಂದು ವಿನೇಶ್ ಫೋಗಟ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments