Webdunia - Bharat's app for daily news and videos

Install App

ಈ ಬಾರಿ ಯಾರು ಪ್ರಧಾನಿಯಾಗುತ್ತಾರೆಂದು ಭವಿಷ್ಯ ನುಡಿದ ನೊಣವಿನಕೆರೆ ಸ್ವಾಮೀಜಿ

Krishnaveni K
ಭಾನುವಾರ, 10 ಮಾರ್ಚ್ 2024 (09:58 IST)
Photo Courtesy: Twitter
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಯಾರು ನಮ್ಮ ದೇಶದ ಪ್ರಧಾನಿ ಹುದ್ದೆಗೇರಲಿದ್ದಾರೆ ಎಂದು ನೊಣವಿನಕೆರೆಯ ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಅವರ ಈ ಭವಿಷ್ಯವಾಣಿ ವೈರಲ್ ಆಗಿದೆ. ಈ ಬಾರಿ ದೇಶಕ್ಕೆ ಮಹಿಳೆಯೊಬ್ಬರು ಪ್ರಧಾನಿ ಹುದ್ದೆಗೇರಲಿದ್ದಾರೆ. ಬಳಿಕ ಅವರು ಪುರುಷರೊಬ್ಬರಿಗೆ ಸ್ಥಾನ ಬಿಟ್ಟುಕೊಡಲಿದ್ದಾರೆ ಎಂದು ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಈ ಮೊದಲು ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಗೆ 135 ಸೀಟುಗಳು ಸಿಗಲಿದೆ ಎಂದು ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದರು. ಅದರಂತೆಯೇ ಆಗಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಗೆಲ್ಲಲಿದ್ದಾರೆ. ಪುರುಷನ ವಿರುದ್ಧ ದುರ್ಗಿಯಂತೆ ನಿಂತು ತಾನೇ ಪ್ರಧಾನಿ ಪಟ್ಟಕ್ಕೇರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಅವರ ಈ ಭವಿಷ್ಯದ ಪ್ರಕಾರ ಪ್ರಿಯಾಂಕ ಗಾಂಧಿ ಪ್ರಧಾನಿ ಹುದ್ದೆಗೇರಿ ಬಳಿಕ ಆ ಸ್ಥಾನವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಡಲಿದ್ದಾರೆ. ಶಿವರಾತ್ರಿಗೆ ಮುನ್ನ ಚುನಾವಣೆ ನಡೆದಿದ್ದರೆ ಈಗಿನ ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗವಿತ್ತು.  ಆದರೆ ನಂತರ ನಡೆಯುವ ಕಾರಣ ಅನ್ಯ ಪಕ್ಷಗಳ ಸಹಾಯದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments