Webdunia - Bharat's app for daily news and videos

Install App

ತಮಗೆ ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿ ಹಂಚಿದ್ದಾನೆ ಎಂದು ಯತ್ನಾಲ್‌ ಹೊಸ ವರಸೆ

Sampriya
ಸೋಮವಾರ, 2 ಡಿಸೆಂಬರ್ 2024 (14:08 IST)
ನವದೆಹಲಿ: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸದಾ ಟೀಕೆ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ತಮಗೆ ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿ ಹಂಚಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಯತ್ನಾಳ್, ನನಗೆ ಈವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್‌ಆಪ್ ನಲ್ಲಿ ನೊಟೀಸ್ ಬಂದಿದೆ. ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ. ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎನಿಸುತ್ತಿದೆ. ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ ಎಂದು ವರಸೆ ತೆಗೆದಿದ್ದಾರೆ.

ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಯಡಿಯೂರಪ್ಪ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ, ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಎಂದು ಟೀಕೆ ಮಾಡಿದರು.

ನೊಟೀಸ್ ಸಂಬಂಧ ನಾನು ಯಾವುದೇ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವುದಿಲ್ಲ. ನನಗೆ ಬಂದಿರುವ ನೊಟೀಸ್ ನಕಲಿ ಎಂದೆನಿಸುತ್ತಿದೆ. ವಿಜಯೇಂದ್ರ ಅವರಪ್ಪನ ಸಹಿ ಮಾಡಿ ಕಡತಗಳನ್ನು ರವಾನಿಸಿರುವ ಉದಾಹರಣೆಗಳಿವೆ. ಈ ಬಗ್ಗೆ ಹರಿಪ್ರಸಾದ್ ಆರೋಪ ಮಾಡಿದ್ದರು ಎಂದು ಯತ್ನಾಳ್ ಹೊಸ ಆರೋಪ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments