Webdunia - Bharat's app for daily news and videos

Install App

ವಾಯುವ್ಯ ಭಾರತಕ್ಕೆ ಹಳದಿ ಎಚ್ಚರಿಕೆ!

Webdunia
ಶನಿವಾರ, 7 ಮೇ 2022 (07:15 IST)
ದೇಶಾದ್ಯಂತ ಬಿಸಿಗಾಳಿ ತಗ್ಗಿದ ಬೆನ್ನಲ್ಲೇ ಪಶ್ಚಿಮದ ವಾತಾವರಣ ಬದಲಾವಣೆಯಿಂದಾಗಿ ಹವಾಮಾನ ಇಲಾಖೆ ವಾಯುವ್ಯ ಭಾರತಕ್ಕೆ ‘ಹಳದಿ ಎಚ್ಚರಿಕೆಯನ್ನು ನೀಡಿದೆ.
 
ದೆಹಲಿ, ಪಂಜಾಬ್, ಹರ್ಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಬಿಸಿಗಾಳಿ ಸದ್ಯದಲ್ಲೇ ಅಂತ್ಯವಾಗಲಿದೆ. ಆದರೆ ರಾಜಸ್ಥಾನ ಮತ್ತು ವಿದರ್ಭ ಭಾಗಗಳಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

‘ಗಂಭೀರವಾದ ಬಿಸಿಗಾಳಿ ದೇಶಾದ್ಯಂತ ಕಡಿಮೆಯಾಗಿದೆ. ನಾವು ಮುನ್ಸೂಚನೆ ನೀಡಿದಂತೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಏ.30ಕ್ಕೆ ಬಿಸಿಗಾಳಿ ಮುಗಿದಿದೆ. ಇನ್ನೆರಡು ದಿನಗಳಲ್ಲಿ ಈ ಭಾಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಗಳಿವೆ. ಅದೇ ರೀತಿ ಪಶ್ಚಿಮದ ಕ್ಷೋಭೆ ಇರುವುದರಿಂದ ವಾಯುವ್ಯ ಭಾರತದಲ್ಲಿ ಬಿಸಿಗಾಳಿ ಮುಂದುವರೆಯುವ ಸಾಧ್ಯತೆ ಇದೆ.

ಹಾಗಾಗಿ ಹಳದಿ ಎಚ್ಚರಿಕೆ ನೀಡಿದ್ದೇವೆ. ಮೇ 3ರಂದು ದೆಹಲಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಪಶ್ಚಿಮದ ಕ್ಷೋಭೆಯಿಂದಾಗಿ ದೆಹಲಿ, ಲಖನೌ ಮತ್ತು ಜೈಪುರಗಳಲಿ ಭಾರಿ ಮಾರುತಗಳು ಬೀಸಲಿವೆ. ಇದೇ ಸ್ಥಿತಿ ಮುಂದಿನ 6ರಿಂದ 7 ದಿನಗಳ ಕಾಲ ಮುಂದುವರೆಯಲಿದೆ.

ಪೂರ್ವ ಮಾರುತಗಳು ಸಹ ಬಲವಾಗಿರುವುದರಿಂದ ಉಷ್ಣಾಂಶದಲ್ಲಿ ಯಾವುದೇ ಏರಿಕೆಯಾಗುವ ಸಾಧ್ಯತೆ ಇಲ್ಲ. ಸದ್ಯಕ್ಕೆ ಮೇ 7ರವರೆಗೆ ಬಿಸಿಗಾಳಿ ಸೃಷ್ಟಿಯಾಗುವ ಲಕ್ಷಣಗಳಿಲ್ಲ. ನಂತರದ ದಿನಗಳ ಪರಿಸ್ಥಿತಿಯನ್ನು ಉಷ್ಣಾಂಶ ಆಧರಿಸಿ ನಿರ್ಣಯಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments