Webdunia - Bharat's app for daily news and videos

Install App

ಭಯೋತ್ಪಾದಕರಿಗೆ ಕಾಂಗ್ರೆಸ್ ಬಿರಿಯಾನಿ ಕೊಟ್ಟು ಸಾಕುತ್ತಿತ್ತು: ಯೋಗಿ ಆದಿತ್ಯನಾಥ್ ವಾಗ್ದಾಳಿ

Krishnaveni K
ಸೋಮವಾರ, 8 ಏಪ್ರಿಲ್ 2024 (10:30 IST)
ಜೈಪುರ: ಲೋಕಸಭೆ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಕಾಂಗ್ರೆಸ್ ದೇಶಕ್ಕೆ ಅತೀ ದೊಡ್ಡ ಸಮಸ್ಯೆ. ಕರ್ಫ್ಯೂ ಹೇರಿಕೆ ಮಾಡುವುದು ಅವರ ಡಿಎನ್ ಎನಲ್ಲೇ ಇದೆ.  ಬಡವರನ್ನು ಹಸಿವಿಗೆ ನೂಕಿ, ಭಯೋತ್ಪಾದಕರಿಗೆ ಬಿರಿಯಾನಿ ಕೊಟ್ಟು ಸಾಕುತ್ತದೆ’ ಎಂದು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಯೋಗಿ ವಾಗ್ದಾಳಿ ನಡೆಸಿದ್ದಾರೆ.

‘ರಾಮನಿಗೆ ದೇವಾಲಯ ಕಟ್ಟಿಸುವುದು ಬಿಡಿ, ಕಾಂಗ್ರೆಸ್ ಪ್ರಕಾರ ರಾಮ ಮತ್ತು ಕೃಷ್ಣ ಕಾಲ್ಪನಿಕ ಪಾತ್ರಗಳು. ಕಾಂಗ್ರೆಸ್ ಆಳ್ವಿಕೆಯಲ್ಲಿ ಬಡವರ ರಕ್ತ ಹೀರುವುದೇ ಕೆಲಸವಾಗಿತ್ತು’ ಎಂದು ಯೋಗಿ ಹೇಳಿದ್ದಾರೆ. ಮೋದಿ ಆಡಳಿತದಲ್ಲಿ ಕಳೆದ 10 ವರ್ಷಗಳಲ್ಲಿ ದೇಶದ ಗಡಿ ಭಾಗ ಸುರಕ್ಷಿತವಾಗಿದೆ. ಇದಕ್ಕೆ ಮೊದಲು ದೇಶದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗಿತ್ತು. ಮೂರು ದಿನಗಳ ಹಿಂದೆ ಬ್ರಿಟಿಷ್ ಮಾಧ‍್ಯಮದಲ್ಲಿ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತ ಸುದ್ದಿ ಬಂದಿತ್ತು. ಇದು ನವ ಭಾರತ. ಈಗ ಭಯೋತ್ಪಾದಕರು ತಮ್ಮ ದಿನಗಳನ್ನು ಎಣಿಸುತ್ತಿದ್ದಾರೆ’ ಎಂದು ಯೋಗಿ ಹೇಳಿದ್ದಾರೆ.

ಈಗ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರವನ್ನು ತರಬೇಕಿದೆ ಎಂದು ಯೋಗಿ ಕರೆ ಕೊಟ್ಟಿದ್ದಾರೆ. ಈಗ ಯಾರಿಗೂ ಭಾರತ ವಿರುದ್ಧ ಕೆಲಸ ಮಾಡಲು ಧೈರ್ಯವಿಲ್ಲ, ಏರ್ ಸ್ಟ್ರೈಕ್ ಆಗುವ ಭಯವಿದೆ ಎಂದು ಪಾಕಿಸ್ತಾನವನ್ನುದ್ದೇಶಿಸಿ ಯೋಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments