Webdunia - Bharat's app for daily news and videos

Install App

ಕರ್ನಾಟಕದ ಚುನಾವಣೆಗೆ ಯೋಗಿ ಆದಿತ್ಯನಾಥ್ ಸ್ಟಾರ್ ಪ್ರಚಾರಕ?

Webdunia
ಭಾನುವಾರ, 31 ಡಿಸೆಂಬರ್ 2017 (16:14 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಟಾರ್ ಪ್ರಚಾರಕರನ್ನಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯಕ್ಕೆ ಕರೆತರಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆ.
 
ಗುಜರಾತ್‌ನಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಿದ ಕಡೆಗಳಲ್ಲಿ ಬಿಜೆಪಿಗೆ ಅನುಕೂಲವಾಗಿದೆ ಎನ್ನಲಾಗಿದ್ದು, ಆದ್ದರಿಂದ ರಾಜ್ಯದಲ್ಲೂ ಅವರಿಂದ ಪ್ರಚಾರ ನಡೆಸಲು ಕೇಂದ್ರ ನಾಯಕರು ಚಿಂತನೆ ನಡೆಸಿದ್ದಾರೆ.
 
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ 35 ಕ್ಷೇತ್ರಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಿದ್ದರು. ಅವುಗಳಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಕಂಡಿರುವುದು ಪಕ್ಷದ ಆಂತರಿಕ ಸಮೀಕ್ಷೆಯಿಂದ ತಿಳಿದುಬಂದಿದೆ. ಆದ್ದರಿಂದ ರಾಜ್ಯದಲ್ಲಿ ಅವರನ್ನು ಪ್ರಮುಖ ಪ್ರಚಾರಕರನ್ನಾಗಿ ಕರೆತಂದು ಹಿಂದುತ್ವ ರಾಜಕೀಯದ ಸಹಜ ಪ್ರಚಾರಕ ಆದಿತ್ಯನಾಥ್ ಅವರನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಲು ಕರ್ನಾಟಕ ಸಜ್ಜಾಗಿದೆ ಎಂದು ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments