Webdunia - Bharat's app for daily news and videos

Install App

ಉ.ಪ್ರದೇಶವನ್ನು "ರೋಗಿ" ಯಾಗಿಸಿದ ಸಿಎಂ ಯೋಗಿ: ಕಾಂಗ್ರೆಸ್

Webdunia
ಸೋಮವಾರ, 4 ಸೆಪ್ಟಂಬರ್ 2017 (20:31 IST)
ವೈದ್ಯಕೀಯ ಸೌಲಭ್ಯದಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ಒಂದು ತಿಂಗಳಿನಲ್ಲಿ 49 ಮಕ್ಕಳು ಮೃತಪಟ್ಟಿದ್ದ ಫರೂಕಾಬಾದ್ ದುರಂತದ ಬಗ್ಗೆ ಟೀಕಿಸಿದ ಕಾಂಗ್ರೆಸ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಡೀ ರಾಜ್ಯ ರೋಗಿಯಾಗಿಸಿದ್ದಾರೆ ಎಂದು ಕಿಡಿಕಾರಿದೆ.
"ನೀವು ಉತ್ತರ ಪ್ರದೇಶದಿಂದ ಬಂದವರು. ರಾಜ್ಯದ ಜನತೆಯ ಆರೋಗ್ಯವನ್ನು ಕಾಪಾಡುವುದು ನಿಮ್ಮ ನೇರ ಜವಾಬ್ದಾರಿ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯವನ್ನು ಆಳಲು ಅಸಮರ್ಥನಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ಬದಲಾಯಿಸಬೇಕು ಎಂದು ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ವಾಗ್ದಾಳಿ ನಡೆಸಿದ್ದಾರೆ. 
 
ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅಬ್ಬರಿಸಿದ ಬಬ್ಬರ್, ಇಂತಹ ಘೋರ ದುರಂತವನ್ನು ನಿರ್ಲಕ್ಷಿಸಿ ಆರೆಸ್ಸೆಸ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments