Webdunia - Bharat's app for daily news and videos

Install App

‘ನೀವು ನಮ್ಮ ದೇಶದ ಹೆಮ್ಮೆ‘: ವಿನೇಶ್‌ ಫೋಗಟ್‌ಗೆ ಧೈರ್ಯ ತುಂಬಿದ ಬಿಜೆಪಿ ನಾಯಕರು

Sampriya
ಬುಧವಾರ, 7 ಆಗಸ್ಟ್ 2024 (16:49 IST)
Photo Courtesy X
ದೆಹಲಿ: ಒಲಿಂಪಿಕ್ಸ್‌ನಲ್ಲಿ ಫೋಗಟ್ ಅವರ ಹಿನ್ನಡೆ ಖಂಡಿತವಾಗಿಯೂ ಲಕ್ಷಾಂತರ ಭಾರತೀಯರ ಭರವಸೆಯನ್ನು ಮುರಿದಿದೆ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಭೇಸರ ವ್ಯಕ್ತಪಡಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಫೋಗಟ್‌ ಅನರ್ಹತೆ ಬಗ್ಗೆ ರಾಜಕೀಯ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.
50 ಕೆಜಿ ಮಹಿಳಾ ಕುಸ್ತಿ ಫೈನಲ್‌ನಿಂದ  ಕುಸ್ತಿಪಟು ವಿನೇಶ್ ಫೋಗಟ್ ಅನರ್ಹರಾಗಿರುವುದರಿಂದ ಭಾರತಕ್ಕೆ ದೊಡ್ಡ ಆಘಾತವಾಗಿದೆ. ವಿನೇಶ್ ಭಾರೀ ನಿರಾಸೆ ಅನುಭವಿಸಿದ ಬೆನ್ನಲ್ಲೇ ರಾಜಕೀಯ ಮುಖಂಡರು ಅವರಿಗೆ ಸಮಾಧಾನದ ಮಾತುಗಳನ್ನು ಹೇಳಿದ್ದಾರೆ.


ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ 'ವಿನೇಶ್ ಫೋಗಟ್‌ಗೆ ತಮ್ಮ ಬೆಂಬಲವನ್ನು ನೀಡಿದರು ಮತ್ತು ಒಲಿಂಪಿಕ್ಸ್‌ನಲ್ಲಿ ಫೋಗಟ್ ಅವರ ಹಿನ್ನಡೆ ಖಂಡಿತವಾಗಿಯೂ ಲಕ್ಷಾಂತರ ಭಾರತೀಯರ ಭರವಸೆಯನ್ನು ಮುರಿದಿದೆ' ಎಂದು ಬೇಸರ ವ್ಯಕ್ತಪಡಿಸಿದರು. ಈ ಬಗ್ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

"ಒಲಿಂಪಿಕ್ಸ್‌ನಲ್ಲಿ ವಿನೇಶ್ ಫೋಗಟ್ ಅವರ ಹಿನ್ನಡೆಯು ಲಕ್ಷಾಂತರ ಭಾರತೀಯರ ಭರವಸೆಯನ್ನು ಖಂಡಿತವಾಗಿಯೂ ಮುರಿದಿದೆ. ಅವರು ಅದ್ಭುತ ಕ್ರೀಡಾ ವೃತ್ತಿಜೀವನವನ್ನು ಹೊಂದಿದ್ದಾರೆ, ವಿಶ್ವ ಚಾಂಪಿಯನ್‌ನನ್ನು ಸೋಲಿಸಿದ ಕೀರ್ತಿಯೊಂದಿಗೆ ಮಿಂಚುತ್ತಿದ್ದಾರೆ. ಅವಳು ಯಾವಾಗಲೂ ವಿಜೇತಳಾಗಲು ಮತ್ತೆ ಪುಟಿದೇಳುತ್ತಾಳೆ, ನಮ್ಮ ಶುಭಾಶಯಗಳು ಮತ್ತು ಬೆಂಬಲ ಯಾವಾಗಲೂ ಅವಳೊಂದಿಗೆ ಇರುತ್ತದೆ" ಎಂದು  ಅವರು ಬರೆದುಕೊಂಡಿದ್ದಾರೆ.

ಇಷ್ಟು ಚೆನ್ನಾಗಿ ಕುಸ್ತಿ ನಡೆಸಿ ಫೈನಲ್‌ಗೆ ಅರ್ಹತೆ ಪಡೆದ ನಂತರವೂ ವಿನೇಶ್ 100 ಗ್ರಾಂ ಅಧಿಕ ತೂಕ ಹೊಂದಿರುವ ಕಾರಣದಿಂದ ಅನರ್ಹಗೊಂಡಿರುವುದು ನಮ್ಮ ದೇಶದ ಅತ್ಯಂತ "ದುರದೃಷ್ಟಕರ" ಎಂದು ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಸಂಜಯ್ ಸಿಂಗ್ ಹೇಳಿದ್ದಾರೆ.

2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೋಗಟ್ ಅವರ ಅತ್ಯುತ್ತಮ ಪ್ರದರ್ಶನವು ಭಾರತವನ್ನು ಬೆಳಗಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments