Webdunia - Bharat's app for daily news and videos

Install App

ತಂದೆಗೆ ಕಣ್ಣೀರು ತರಿಸುವುದು ಶೋಭೆ ತರಲ್ಲ: ಅಖಿಲೇಶ್ ಯಾದವ್‌ಗೆ ದೇವೇಗೌಡ ಸಲಹೆ

Webdunia
ಸೋಮವಾರ, 31 ಅಕ್ಟೋಬರ್ 2016 (14:33 IST)
ನನ್ನ ಆತ್ಮಿಯ ಮಿತ್ರನಿಗೆ ಕಣ್ಣೀರು ತರಿಸುವಂತೆ ಮಾಡಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ಗೆ ಸಲಹೆ ನೀಡಿದ್ದಾರೆ.
 
13 ರಾಜಕೀಯ ಪಕ್ಷಗಳು ಮುಲಾಯಂ ನಾಯಕತ್ವವನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದವು. ಅಂತಹ ಮಹಾನ್ ನಾಯಕನಿಗೆ ಕಣ್ಣೀರು ತರಿಸುವುದು ಪುತ್ರನಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.
 
ಉತ್ತರಪ್ರದೇಶದ ಸಮಾಜವಾದಿ ಪಕ್ಷದಲ್ಲಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಮಧ್ಯೆ ತೀವ್ರ ತೆರನಾದ ಭಿನ್ನಮತ ಉಂಟಾಗಿದೆ.
 
ಸಾರ್ವಜನಿಕವಾಗಿ ತಂದೆ ಮತ್ತು ಚಿಕ್ಕಪ್ಪನ ವಿರುದ್ಧ ಹೇಳಿಕೆಗಳನ್ನು ನೀಡುವುದು ಬಿಟ್ಟು ತಂದೆಯೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಸಮಾಜವಾದಿ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನನಗೆ ನೋವು ತಂದಿವೆ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.
 
ಮುಲಾಯಂ ಸಿಂಗ್ ಯಾದವ್ ಕೇವಲ ನನ್ನ ಆತ್ಮಿಯ ಗೆಳೆಯರಲ್ಲ. ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. ಸಿದ್ದಾಂತದ ಆಧಾರಗಳ ಮೇಲೆ ಪಕ್ಷವನ್ನು ಕಟ್ಟಲು ತುಂಬಾ ಶ್ರಮಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

\ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments