Webdunia - Bharat's app for daily news and videos

Install App

ನೀವು ವಾಗ್ದಾನ ಪೂರ್ಣಗೊಳಿಸುತ್ತಿಲ್ಲ: ಕೇಜ್ರಿಗೆ ಅಣ್ಣಾ ತರಾಟೆ

Webdunia
ಭಾನುವಾರ, 25 ಡಿಸೆಂಬರ್ 2016 (12:13 IST)
ಸಮಾಜದಲ್ಲಿ ನಾನು ಬದಲಾವಣೆಯನ್ನು ತರುತ್ತೇನೆ ಎಂದು ವಾಗ್ದಾನ ಮಾಡಿದ್ದ ನೀವು ನನಗೆ ಕೊಟ್ಟ ಮಾತನ್ನು ಪೂರೈಸಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ದೆಹಲಿ ಸಿಎಂ, ತಮ್ಮ ಶಿಷ್ಯ ಅರವಿಂದ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 
ಕೇಜ್ರಿವಾಲ್ ಅವರಿಗೆ ಪತ್ರ ಬರೆದಿರುವ ಅಣ್ಣಾ, ಕಮಲ ಮತ್ತು ಕೈ ಪಕ್ಷಕ್ಕೆ ಹರಿದು ಬರುವ ನಿಧಿಮೂಲವನ್ನು ಪ್ರಶ್ನಿಸುತ್ತಿದ್ದ ಆಮ್ ಆದ್ಮಿ ಪಕ್ಷ ತನ್ನ ವೆಬ್ಸೈಟ್‌ನಲ್ಲಿ ಪಕ್ಷಕ್ಕೆ ಧನಸಹಾಯ ಮಾಡುವವರ ಪಟ್ಟಿಯನ್ನು ತೆಗೆದು ಹಾಕಿದ್ದನ್ನು ಪ್ರಶ್ನಿಸಿದ್ದಾರೆ. ಮತ್ತೀಗ ನಿಮಗೂ ಮತ್ತು ಇತರ ಪಕ್ಷಗಳಿಗೂ ಇರುವ ವ್ಯತ್ಯಾಶವೇನು ಎಂದು ಅವರು ಪ್ರಶ್ನಿಸಿದ್ದಾರೆ. 
 
ವ್ಯವಸ್ಥೆಯಲ್ಲೇನಾದರೂ ಬದಲಾವಣೆ ತರುವ ಅಪೇಕ್ಷೆ ಇರುವ ನಾಯಕತ್ವ ಅಂತಹ ವಿಚಾರದಲ್ಲಿ ಸಮಗ್ರ ಚರ್ಚೆ ನಡೆಸಬೇಕೆಂದು ಅವರು ಡಿಸೆಂಬರ್ 23 ರಂದು ಕೇಜ್ರಿ ಅವರಿಗೆ ಬರೆದಿರುವ ಪತ್ರದಲ್ಲಿ ಅಣ್ಣಾ ತಾಕೀತು ಮಾಡಿದ್ದಾರೆ. 
 
ಮಹಾರಾಷ್ಟ್ರಿಗರ ಪರವಾಗಿ ಮಾಡಬೇಕಿದ್ದ ಕೆಲಸಗಳನ್ನು ಬದಿಗಿಟ್ಟು, ದೇಶದ ಮತ್ತು ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಮಾಡಿ ಅನೇಕ ಕನಸುಗಳನ್ನು ಕಂಡೆ. ಆದರೆ ದೇಶದ ಬಗ್ಗೆ ನನಗಿರುವ ಕನಸುಗಳನ್ನು ನೀವು ನುಚ್ಚುನೂರು ಮಾಡಿದ್ದೀರಿ ಎಂದು ಹಿರಿಯ ಚೇತನ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments