Webdunia - Bharat's app for daily news and videos

Install App

ರಾಹುಲ್ ಗಾಂಧಿ ವಿರುದ್ಧ ಪೋಸ್ಟ್ ಹಾಕಿದ ಯೂ ಟ್ಯೂಬರ್ ಬಂಧಿಸಲು ನೋಯ್ಡಾ ತಲುಪಿದ ಕರ್ನಾಟಕ ಪೊಲೀಸರು

Krishnaveni K
ಶುಕ್ರವಾರ, 21 ಜೂನ್ 2024 (11:12 IST)
Photo Credit: X
ನೋಯ್ಡಾ: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಯೂ ಟ್ಯೂಬರ್, ಪತ್ರಕರ್ತ ಅಜಿತ್ ಭಾರ್ತಿ ಅವರನ್ನು ಬಂಧಿಸಲು ಕರ್ನಾಟಕ ಪೊಲೀಸರು ನೋಯ್ಡಾಗೆ ಬಂದಿಳಿದಿದ್ದಾರೆ.

ಈ ವಿಚಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಜಿತ್ ಭಾರ್ತಿ ಮನೆ ಮುಂದೆ ಕರ್ನಾಟಕ ಪೊಲೀಸರು ಮಾರು ವೇಷದಲ್ಲಿ ಬಂದು ನಿಂತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಏನಿದು ಪ್ರಕರಣ ಇಲ್ಲಿದೆ ಮಾಹಿತಿ ನೋಡಿ.

ಅಜಿತ್ ಭಾರ್ತಿ ಎಂಬವರು ತಮ್ಮ ಯೂ ಟ್ಯೂಬ್ ಚಾನೆಲ್ ನಲ್ಲಿ ರಾಹುಲ್ ಗಾಂಧಿ ಮುಂದೆ ಅಧಿಕಾರಕ್ಕೆ ಬಂದ ಬಳಿಕ ರಾಮಮಂದಿರ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಬಯಸಿದ್ದಾರೆ ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ಕರ್ನಾಟಕ ಕಾಂಗ್ರೆಸ್ ಘಟಕ ಇಲ್ಲಿನ ಪೊಲೀಸರಿಗೆ ದೂರು ನೀಡಿತ್ತು. ಅದರಂತೆ ಇಲ್ಲಿ ಎಫ್ ಐಆರ್ ಕೂಡಾ ದಾಖಲಾಗಿತ್ತು. ಇದೀಗ ತಮ್ಮನ್ನು ಬಂಧಿಸಲೆಂದು ಬಂದ ಕರ್ನಾಟಕ ಪೊಲೀಸರ ಬಗ್ಗೆ ಅಜಿತ್ ಭಾರ್ತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನಮ್ಮ ಮನೆ ಮುಂದೆ ಕರ್ನಾಟಕ ಪೊಲೀಸರು ಎಂದು ಹೇಳಿಕೊಂಡು ಮೂವರು ಯುವಕರು ನೋಟಿಸ್ ನೀಡಲು ಬಂದಾಗ ಭಾರ್ತಿ ನೀವು ಇಲ್ಲಿನ ಪೊಲೀಸರಿಗೆ ಸೂಚನೆ ನೀಡಿದ್ದೀರಾ ಎಂದು ಕೇಳಿದೆ. ಅವರು ಇಲ್ಲವೆಂದಾಗ ತಾವೇ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದೆ. ತಕ್ಷಣವೇ ಬಂದ ಪೊಲೀಸರು ಕರ್ನಾಟಕ ಪೊಲೀಸರು ಎಂದು ಬಂದಿದ್ದ ಮೂವರು ಯುವಕರನ್ನು ಕರೆದೊಯ್ದಿದ್ದಾರೆ’ ಎಂದು ಭಾರ್ತಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments