Webdunia - Bharat's app for daily news and videos

Install App

ಕುಟುಂಬದ ಸದಸ್ಯರ ಮುಂದೆಯೇ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಗುರುವಾರ, 9 ನವೆಂಬರ್ 2023 (14:55 IST)
ಅಕ್ರಮ ಗಾಂಜಾ ಕೂಡಿಟ್ಟಿದ್ದೀರಾ, ತನಿಖೆ ನಡೆಸಬೇಕು ಎಂಬ ನೆಪ ಹೇಳಿ ಪೊಲೀಸರ ವೇಷದಲ್ಲಿ ಏಕಾಯೇಕಿ ಮಹಿಳೆಯ ಮನೆಗೆ ನುಗ್ಗಿದ ನಾಲ್ವರು ಆರೋಪಿಗಳು ಮನೆಯಲ್ಲಿದ್ದ  ಚಿನ್ನಾಭರಣ ಮತ್ತು ಹಣವನ್ನು ದೋಚಿದ್ದಾರೆ. ನಂತರ  ಸೀರೆಯಿಂದ  ಮಹಿಳೆಯ ಪತಿ, ಅತ್ತೆ ಮತ್ತು 9 ವರ್ಷದ ಮಗನನ್ನು ಕಟ್ಟಿ ಹಾಕಿ, ಅವರ ಮುಂದೆಯೇ 26 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
 
ಪೊಲೀಸರ ಸೋಗಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು, ಪತಿ, ಮಗ ಮತ್ತು ಅತ್ತೆಯ ಮುಂದೆಯೇ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ದೆಹಲಿಯಲ್ಲಿ ಈ ಘಟನೆ ನಡೆದಿದ್ದು ಬಹಳ ತಡವಾಗಿ ಬೆಳಕಿಗೆ ಬಂದಿದೆ. 
 
ತಮ್ಮ ಕೀಚಕಕೃತ್ಯದ ವಿಡಿಯೋ ಚಿತ್ರೀಕರಣವನ್ನು ಕೂಡ  ಮಾಡಿಕೊಂಡ ಖದೀಮರು ಪೊಲೀಸರಲ್ಲಿ ದೂರು ನೀಡಿದರೆ  ಅತ್ಯಾಚಾರದ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ನಾಲ್ವರನ್ನು ಕಟ್ಟಿ ಹಾಕಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪೀಡಿತಳ ಕುಟುಂಬದವರ ಕಿರುಯಾಟವನ್ನು ಕೇಳಿಸಿಕೊಂಡ ನೆರೆಹೊರೆಯವರು ಸ್ಥಳಕ್ಕೆ ಬಂದು ಅವರನ್ನು ರಕ್ಷಿಸಿದ್ದಾರೆ.
 
ಅಕ್ಟೋಬರ್  26 ರಂದು ದಂಪತಿಗಳು ಪೊಲೀಸ್ ಠಾಣೆಯಲ್ಲಿ ತಮ್ಮ ಮನೆಯಲ್ಲಿ ಡಕಾಯಿತಿಯಾಗಿದೆ ಎಂದು ಪ್ರಕರಣ ದಾಖಲಿಸಿದ್ದಾರೆ. ಮರುದಿನ  ಅತ್ಯಾಚಾರವಾಗಿರುವ ಬಗ್ಗೆಯೂ ದೂರು ದಾಖಲಿಸಿದ್ದಾರೆ. 
 
ಪೊಲೀಸರು ಕೆಲವು ಅಪರಾಧಿಗಳ ಭಾವಚಿತ್ರವನ್ನು ತೋರಿಸಿದಾಗ ಅವರಲ್ಲಿ ಒಬ್ಬನನ್ನು ದಂಪತಿಗಳು ಗುರುತಿಸಿದ್ದಾರೆ. ಅದರ ಆಧಾರದ ಮೇಲೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಅನಿಲ್ ಕುಮಾರ್, ನಂದೀಶ್, ಸೈಮನ್, ಸುಜಿತ್ ಎಂದು ಗುರುತಿಸಲಾಗಿದ್ದು ಇವರು ಹಲವಾರು  ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ  ಬಂಧನಕ್ಕೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments