Webdunia - Bharat's app for daily news and videos

Install App

ಸಚಿವೆ ಸ್ಮೃತಿ ಇರಾನಿ ಮೇಲೆ ಬಳೆ ಎಸೆದ ಯುವಕ

Webdunia
ಮಂಗಳವಾರ, 13 ಜೂನ್ 2017 (11:21 IST)
ಅಹಮ್ಮದಾಬಾದ್: ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೇಲೆ ಯುವಕನೊಬ್ಬ ಬಳೆ ಎಸೆದು ವಂದೇ ಮಾತರಂ ಎಂದು ಘೋಷಣೆ ಕೂಗಿದ್ದಾನೆ.

 
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಚಿವೆ ಸ್ಮೃತಿ ಇರಾನಿ ಭಾಷಣ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಎದ್ದು ನಿಂತ ಯುವಕ ಮೂರು ಬಳೆ ಸಚಿವರತ್ತ ಎಸೆದ.

ಆದರೆ ಆತ ತುಂಬಾ ಹಿಂದಿನಿಂದ ಎಸೆದಿದ್ದರಿಂದ ಇದು ಸಚಿವರಿಗೆ ತಗುಲಲಿಲ್ಲ. ಆದರೆ ತಕ್ಷಣ ಆತನನ್ನು ಬಂಧಿಸಿದ ಪೊಲೀಸರು ಸಭಾಂಗಣದಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈತನನ್ನು ಕೇತನ್ ಕಸ್ವಾಲಾ ಎಂದು ಗುರುತಿಸಲಾಗಿದೆ.

ಈ ಘಟನೆ ಇದೀಗ ರಾಜಕೀಯ ತೆರವು ಪಡೆಯುತ್ತಿದ್ದು, ರಾಜ್ಯದಲ್ಲಿ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಈತ ಬಳೆ ಎಸೆದಿದ್ದಾನೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಆತ ಬಳೆ ಎಸೆಯುವಾಗ ವಂದೇ ಮಾತರಂ ಎಂದು ಮಾತ್ರ ಘೋಷಣೆ ಕೂಗಿದ್ದ ಎಂದಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments