Select Your Language

Notifications

webdunia
webdunia
webdunia
webdunia

ಕುಡಿದ ಮತ್ತಿನಲ್ಲಿ ಗಲಾಟೆ: ಸಹೋದರನ ಕೊಂದ ವ್ಯಕ್ತಿ ಅರೆಸ್ಟ್

ಕುಡಿದ ಮತ್ತಿನಲ್ಲಿ ಗಲಾಟೆ: ಸಹೋದರನ ಕೊಂದ ವ್ಯಕ್ತಿ ಅರೆಸ್ಟ್
ತಿರುವನಂತಪುರಂ , ಶನಿವಾರ, 26 ಮಾರ್ಚ್ 2022 (09:20 IST)
ತಿರುವನಂತಪುರಂ: ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡನನ್ನು ಸಹೋದರನನ್ನು ಕೊಂದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

27 ವರ್ಷದ ಬಾಬು ಎಂಬಾತನನ್ನು ಸಹೋದರ ಸಾಬು ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಮನೆಯ ಸಮೀಪವೇ ಮಣ್ಣಿನಡಿಯಲ್ಲಿ ಹೂತು ಹಾಕಿದ್ದ. ಇದನ್ನು ಸ್ಥಳೀಯರೊಬ್ಬರು ಗಮನಿಸಿದ್ದರು. ಬಳಿಕ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಸಹೋದರನನ್ನು ಪ್ರಶ್ನಿಸಿದಾಗ ಆತನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಸಾಬು ಕುಡಿದು ಮನೆಗೆ ಬಂದು ದಾಂಧಲೆ ಮಾಡಿದ್ದನ್ನು ಸಹೋದರ ಬಾಬು ಅದನ್ನು ಪ್ರಶ್ನಿಸಿದ್ದ. ಈ ವೇಳೆ ಆರೋಪಿ ಗಾಜಿನ ಚೂರಿನಿಂದ ಇರಿಯಲು ಯತ್ನಿಸಿದ್ದಾನೆ. ಇಬ್ಬರ ನಡುವೆ ಕಿತ್ತಾಟವಾಗಿ ಕೆಸರಿನ ಗುಂಡಿಯೊಕ್ಕೆ ಬಿದ್ದಿದ್ದಾರೆ. ಈ ವೇಳೆ ಸಹೋದರನನ್ನು ಆರೋಪಿ ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

370ನೇ ವಿಧಿ ರದ್ದಿನಿಂದ ಕಾಶ್ಮೀರದಲ್ಲಿ ಹಿಂಸೆ ಇಳಿಕೆ