Webdunia - Bharat's app for daily news and videos

Install App

ಗಾಳಿಪಟ ಹಾರಿಸುವುದನ್ನು ವಿರೋಧಿಸಿದ್ದಕ್ಕೆ ಪೋಷಕರನ್ನೇ ಕೊಂದ ಯುವಕ!

Webdunia
ಗುರುವಾರ, 11 ಅಕ್ಟೋಬರ್ 2018 (11:44 IST)
ನವದೆಹಲಿ: ಓದದೇ ಸದಾ ಗಾಳಿಪಟ ಹಾರಿಸುತ್ತಾ ಕಾಲ ಕಳೆಯುತ್ತೀಯಾ ಎಂದು ಬೈದಿದ್ದಕ್ಕೆ ಪೋಷಕರನ್ನೇ 19 ವರ್ಷದ ಯುವಕನೊಬ್ಬ ಕೊಲೆಗೈದ ಘಟನೆ ದೆಹಲಿಯಲ್ಲಿ ನಡೆದಿದೆ.

ಆಗಸ್ಟ್ 15 ರಂದು ಓದು ಎಂದರೂ ಕೇಳದೇ ಗಾಳಿಪಟ ಹಾರಿಸುತ್ತಿದ್ದ ಮಗನನ್ನು ಪೋಷಕರು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ಬೇಸತ್ತಿದ್ದ ಆತ ತನ್ನ ಅಪ್ಪ –ಅಮ್ಮ ಜತೆಗೆ ಸಹೋದರಿಯನ್ನು ನಿರ್ದಾಕ್ಷಿಣ್ಯವಾಗಿ ಕೊಲೆಗೈದು ಅಮಾಯಕನಂತೆ ನಟಿಸಿದ್ದ.

ಆದರೆ ಕುಟುಂಬದ ಮೂವರೂ ಕೊಲೆಯಾಗಿ ಈತನಿಗೆ ಮಾತ್ರ ಕೈಗ ಬೆರಳಿಗೆ ಗಾಯವಾಗಿದ್ದು ನೋಡಿ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ. ಆ ದಿನ ತನಗೆ ಪೋಷಕರು ಹೊಡೆದರು ಎಂಬ ಕಾರಣಕ್ಕೆ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಈತ ಮೊದಲೇ ಚಾಕು ತಂದಿಟ್ಟುಕೊಂಡಿದ್ದನಂತೆ.

ಸಂಜೆ ಕುಟುಂಬದ ಜತೆ ಸಹಜವಾಗಿಯೇ ಕಾಲ ಕಳೆದ ಈತ ಮಧ್ಯರಾತ್ರಿ ಪೋಷಕರ ಕೊಠಡಿಗೆ ತೆರಳಿ ಮೊದಲು ತಂದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಎಚ್ಚರಗೊಂಡು ಕಿರುಚಿದ ತಾಯಿಗೂ ಚಾಕುವಿನಿಂದ ಇರಿದಿದ್ದ. ನಂತರ ಸಹೋದರಿಯ ಕೊಠಡಿಗೆ ತೆರಳಿ ಚಾಕುವಿನಿಂದ ಕುತ್ತಿಗೆ ಸೀಳಿದ್ದ. ನಂತರ ದರೋಡೆ ನಡೆದಂತೆ ಸಾಕ್ಷ್ಯ ಸೃಷ್ಟಿಸಿ ದರೋಡೆಕೋರರು ತನ್ನ ಕುಟುಂಬದವರನ್ನು ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ. ಆದರೆ ಏನೂ ದರೋಡೆಯಾಗದೇ ಇರುವುದರಿಂದ ಸಂಶಯಗೊಂಡು ವಿಚಾರಣೆ ನಡೆಸಿದಾಗ ನಿಜ ಕಾರಣ ಬಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments