Webdunia - Bharat's app for daily news and videos

Install App

ಝುಕರ್‌ಬರ್ಗ್ ಹೇಳಿಕೆ ಅಪ್ರಜ್ಞಾಪೂರ್ವಕ: ಚುನಾವಣಾ ಹೇಳಿಕೆಗೆ ಕೊನೆಗೂ ಮೆಟಾ ಕ್ಷಮೆಯಾಚಣೆ

Sampriya
ಬುಧವಾರ, 15 ಜನವರಿ 2025 (18:00 IST)
Photo Courtesy X
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಭಾರತದ ಅಂದಿನ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂಬ ಮಾರ್ಕ್ ಝುಕರ್ಬರ್ಗ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಮೆಟಾ ಕ್ಷಮೆಯಾಚನೆ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೆಟಾ ಸಂಸ್ಥೆ, ಝುಕರ್‌ಬರ್ಗ್ ಹೇಳಿಕೆಯನ್ನು ಅಪ್ರಜ್ಞಾಪೂರ್ವಕ ದೋಷ ಎಂದು ಹೇಳಿದೆ. ಝುಕರ್ಬರ್ಗ್ ಹೇಳಿಕೆಗೆ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಅದ್ದೇಶಿಸಿ ಪ್ರತಿಕ್ರಿಯೆ ನೀಡಿರುವ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವಂತ್ ತುಕ್ರಾಲ್ ಮಾತನಾಡಿದ್ದಾರೆ.

ಅಧಿಕಾರದಲ್ಲಿದ್ದ ಹಲವು ಪಕ್ಷಗಳು 2024 ರಲ್ಲಿ ಮತ್ತೆ ಅಧಿಕಾರಕ್ಕೆ ಬರಲಿಲ್ಲ ಎಂಬ ಮಾರ್ಕ್ ಝುಕರ್ಬರ್ಗ್ ಅವರ ಹೇಳಿಕೆ ಹಲವು ರಾಷ್ಟ್ರಗಳಿಗೆ ಹೊಂದಾಣಿಕೆಯಾಗುತ್ತದೆ. ಆದರೆ ಭಾರತಕ್ಕೆ ಅಲ್ಲಎಂದು  ಶಿವಂತ್ ಸ್ಪಷ್ಟನೆ ನೀಡಿದ್ದಾರೆ.

ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ. ಭಾರತವು  ಮೆಟಾಗೆ ಪ್ರಮುಖ ದೇಶವಾಗಿ ಉಳಿದಿದೆ ಮತ್ತು ಭಾರತದ ನವೀನ ಭವಿಷ್ಯದ ಕೇಂದ್ರಭಾಗದಲ್ಲಿರುವುದನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಈ ಹಿಂದೆ ಜೋ ರೋಗನ್ ಪಾಡ್‌ಕ್ಯಾಸ್ಟ್‌ನಲ್ಲಿ ಜುಕರ್‌ಬರ್ಗ್ ಮಾಡಿದ ಹೇಳಿಕೆಗಳನ್ನು ಖಂಡಿಸಿದ್ದರು. 2024 ರ ಚುನಾವಣೆಯಲ್ಲಿ ಭಾರತ ಸೇರಿದಂತೆ ಹೆಚ್ಚಿನ ಅಧಿಕಾರದಲ್ಲಿದ್ದ ಪಕ್ಷಗಳು ಕೋವಿಡ್ ನಂತರ ಸೋತಿವೆ ಎಂಬ ಜುಕರ್‌ಬರ್ಗ್ ಅವರ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ ಎಂದು ವೈಷ್ಣವ್ ಜನವರಿ 13 ರಂದು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಹೇಳಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments