Webdunia - Bharat's app for daily news and videos

Install App

ಕೇರಳದಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಬಲಿ: ಮೂರು ತಿಂಗಳಿನಲ್ಲಿ 5 ಮಂದಿ ದುರ್ಮರಣ

Sampriya
ಸೋಮವಾರ, 1 ಏಪ್ರಿಲ್ 2024 (14:40 IST)
Photo Courtesy X
ಕೇರಳ: ಕೇರಳದ ಪಥನಂತಿಟ್ಟ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಇದರಿಂದ ಕಳೆದ ಮೂರು ಕಾಡು ಪ್ರಾಣಿಗಳ ದಾಳಿಗೆ ಕೇರಳದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇನ್ನೂ ಆನೆಗಳ ದಾಳಿಗೆ ಮೂರು ತಿಂಗಳಿನಲ್ಲಿ 5 ಮಂದಿ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಪತ್ತನಂತಿಟ್ಟದ ತುಳಪಲ್ಲಿ ನಿವಾಸಿ ಕೋಡಿಲಿಲ್ ಬಿಜು (56) ಎಂದು ಗುರುತಿಸಲಾಗಿದೆ.

ಕೇರಳ ಪೊಲೀಸರ ಪ್ರಕಾರ, ಶಬರಿಮಲೆ ಅರಣ್ಯದ ಗಡಿ ಪ್ರದೇಶದಲ್ಲಿರುವ ಎರುಮೇಲಿ ಸಮೀಪದ ತುಳಪಲ್ಲಿಯಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.


ತೆಂಗಿನ ಮರವನ್ನು ಉರುಳಿಸುವ ವೇಳೆ ಬಿಜು ಎಂಬಾತನ ಮೇಲೆ ಆನೆ ದಾಳಿ ಮಾಡಿದ್ದು, ಅಲ್ಲೇ ಸ್ಥಳದಲ್ಲೇ  ಕೊನೆಯುಸಿರೆಳೆದಿದ್ದಾನೆ.

ಘಟನೆಯ ಬಗ್ಗೆ ಅಕ್ರೋಶಗೊಂಡ ಸ್ಥಳಿಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಅಥವಾ ಇತರ ಉನ್ನತ ಅಧಿಕಾರಿಗಳು ಬರುವವರೆಗೂ ಬಿಜು ಅವರ ಮೃತದೇಹವನ್ನು ಸ್ಥಳಾಂತರಿಸಲು ನಿರಾಕರಿಸಿದರು.

ಇದಕ್ಕೂ ಮೊದಲು ಫೆಬ್ರವರಿ 16 ರಂದು ಪುಲ್ಪಲ್ಲಿಯ ಪಕ್ಕಂ ಮೂಲದ ಪೌಲ್, ಆನೆಗಳ ಹಿಂಡು ದಾಳಿಗೆ ಒಳಗಾಗಿ ಸಾವನ್ನಪ್ಪಪಿದರು.  
ಜನವರಿ 30 ರಂದು, ಮಾನಂತವಾಡಿ ಸಮೀಪದ ನಾರಿಕಲ್ ನಿವಾಸಿ ಲಕ್ಷ್ಮಣ್ ಎಂದು ಗುರುತಿಸಲಾದ 55 ವರ್ಷದ ವ್ಯಕ್ತಿಯನ್ನು ಕಾಡಾನೆಗಳು ಕೊಂದಿದ್ದವು.
ಅದೇ ರೀತಿ ಫೆಬ್ರವರಿ 10 ರಂದು ಮಾನಂತವಾಡಿ ಬಳಿ ಅಜೀಶ್ ಎಂಬ 47 ವರ್ಷದ ವ್ಯಕ್ತಿಯನ್ನು ಕಾಡಾನೆ ತುಳಿದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments