Select Your Language

Notifications

webdunia
webdunia
webdunia
webdunia

ರಾಹುಲ್‌ ನಾಲಿಗೆ ಕತ್ತರಿಸುವವರಿಗೆ ₹11 ಲಕ್ಷ ಬಹುಮಾನ: ನಾಲಿಗೆ ಹರಿಬಿಟ್ಟ ಶಿವಸೇನಾ ಶಾಸಕ

Shiv Sena MLA Sanjay Gaikwad

Sampriya

ಮುಂಬೈ , ಸೋಮವಾರ, 16 ಸೆಪ್ಟಂಬರ್ 2024 (14:20 IST)
Photo Courtesy X
ಮುಂಬೈ: ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ ₹11 ಲಕ್ಷ ನೀಡುವುದಾಗಿ ಶಿಂಧೆ ಬಣದ ಶಿವಸೇನಾ ಶಾಸಕ ಸಂಜಯ್ ಗಾಯಕವಾಡ್ ನಾಲಿಗೆ ಹರಿಬಿಟ್ಟಿದ್ದಾರೆ.

ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ರಾಹುಲ್‌ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ ಈ ಬಹುಮಾನ ಎಂದು ವಿದರ್ಭ ಪ್ರದೇಶದ ಬುಲ್ಧಾನ ವಿಧಾನಸಭಾ ಕ್ಷೇತ್ರದ ಶಾಸಕ  ಗಾಯಕವಾಡ್ ಹೇಳಿದ್ದು, ಅದು ವಿವಾದಕ್ಕೆ ಎಡೆಮಾಡಿದೆ.  

ಗಾಯಕವಾಡ್‌ ಅವರ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಸ್ಪಷ್ಟ‍ಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರದಲ್ಲಿ ಬಿಜೆಪಿಯೂ ಮೈತ್ರಿಪಕ್ಷವಾಗಿದೆ.

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾಗ ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ಅನಾವರಣಗೊಳಿಸಿದೆ ಎಂದು ಗಾಯಕವಾಡ್ ವಿಚಿತ್ರ ರೀತಿಯ ಬಹುಮಾನ ಘೋಷಿಸುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿ, ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ: ದುರ್ಬಲಗೊಂಡ ನೈರುತ್ಯ ಮುಂಗಾರು